ಚೆನ್ನೈ: ತಮಿಳುನಾಡು ಸಿಎಂ ವಿಜಯ್ ರೈತ ಕಲ್ಯಾಣದ ಭಾಗವಾಗಿ ಮಹತ್ವದ ನಿರ್ಧಾರ ಕೈಗೊಂಡಿದ್ದು, ಸಹಕಾರಿ ಬ್ಯಾಂಕುಗಳಲ್ಲಿ ಪಡೆದಿರುವ ₹75,000 ವರೆಗಿನ ಬೆಳೆ ಸಾಲವನ್ನು ಸಂಪೂರ್ಣವಾಗಿ ಮನ್ನಾ ಮಾಡುವುದಾಗಿ ಘೋಷಿಸಿದ್ದಾರೆ.
ಹೊಸ ಯೋಜನೆಯ ಪ್ರಕಾರ 2025ರ ಮೇ 1ರಿಂದ 2026ರ ಫೆಬ್ರವರಿ 28ರ ನಡುವೆ ಪಡೆದ ಸಾಲಗಳಿಗೆ ಈ ಸೌಲಭ್ಯ ಅನ್ವಯವಾಗಲಿದೆ. ₹75,000ಕ್ಕಿಂತ ಹೆಚ್ಚು ಸಾಲ ಹೊಂದಿರುವ ರೈತರಿಗೆ ₹35,000 ವರೆಗೆ ಸಾಲ ಮನ್ನಾ ನೀಡಲಾಗುತ್ತದೆ.
ಈ ಯೋಜನೆಯಿಂದ ಒಟ್ಟು 14.43 ಲಕ್ಷ ರೈತರು ಪ್ರಯೋಜನ ಪಡೆಯಲಿದ್ದಾರೆ. ಇವರಲ್ಲಿ ಸಣ್ಣ, ಮಧ್ಯಮ ಹಾಗೂ ದೊಡ್ಡ ರೈತರು ಸೇರಿದ್ದಾರೆ ಎಂದು ಸರ್ಕಾರ ವಿವರಿಸಿದೆ. ಸಂಪೂರ್ಣ ಸಾಲ ಮನ್ನಾ ಪಡೆಯುವ ರೈತರ ಸಂಖ್ಯೆ 6.22 ಲಕ್ಷಕ್ಕೂ ಹೆಚ್ಚು ಎಂದು ಅಂದಾಜಿಸಲಾಗಿದೆ.
ಈ ನಿರ್ಧಾರದಿಂದ ಸರ್ಕಾರಕ್ಕೆ ಸುಮಾರು ₹5,932 ಕೋಟಿ ಆರ್ಥಿಕ ಹೊರೆ ಉಂಟಾಗಲಿದೆ. ಯೋಜನೆ ಅನುಷ್ಠಾನದ ಹಣಕಾಸು ನಿರ್ವಹಣೆಯನ್ನು RBI ಮಾರ್ಗಸೂಚಿಗಳ ಪ್ರಕಾರ 45–60 ದಿನಗಳಲ್ಲಿ ಪೂರ್ಣಗೊಳಿಸುವ ಯೋಜನೆ ಸರ್ಕಾರದದು.



