ಶಿವಮೊಗ್ಗದಲ್ಲಿ ಬೈಕ್ ಗಳ ನಡುವೆ ಡಿಕ್ಕಿ: ಓರ್ವ ಸಾವು – ಇಬ್ಬರಿಗೆ ಗಾಯ

0
Spread the love

ಶಿವಮೊಗ್ಗ: ಬೈಕ್ ಗಳ ನಡುವೆ ಢಿಕ್ಕಿಯಾಗಿ ಓರ್ವ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ತಾಲೂಕಿನ ಗುತ್ತಿಹಳ್ಳ ಬಳಿ ನಡೆದಿದೆ. ಮಂಜುನಾಥ್ ಗದ್ದೆಮನೆ(27) ಮೃತಪಟ್ಟ ದುರ್ದೈವಿಯಾಗಿದ್ದು, ಶಿವಮೊಗ್ಗ ತಾಲೂಕಿನ ಸಂಪಿಗೆಹಳ್ಳ ನಿವಾಸಿಯಾದ ಮಂಜುನಾಥ್ ಡೈರಿಗೆ ಹಾಲು ಹಾಕಿ, ಮನೆಗೆ ಬರುತ್ತಿದ್ದ ವೇಳೆ ಎರಡು ಬೈಕ್ ಗಳ ನಡುವೆ ಮುಖಾಮುಖಿ ಢಿಕ್ಕಿಯಾಗಿದೆ. ಸ್ಥಳೀಯರು ತಕ್ಷಣವೇ ಗಾಯಾಳುವನ್ನ ಮೆಗ್ಗಾನ್ ಆಸ್ಪತ್ರೆಗೆ ಕರೆದೊಯ್ದಿದ್ದರು,

Advertisement

ಹೆಚ್ಚಿನ ಚಿಕಿತ್ಸೆಗೆ ಮಂಜುನಾಥ್ ಖಾಸಗಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು. ಗಂಭೀರ ಗಾಯಗೊಂಡಿದ್ದ ಮಂಜುನಾಥ್ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದು, ಮಂಜುನಾಥ್ ಮೃತದೇಹ ಮೆಗ್ಗಾನ್ ಶವಾಗಾರಕ್ಕೆ ರವಾನೆ ಮಾಡಲಾಗಿದೆ. ಇನ್ನೊಂದು ಬೈಕ್ ನಲ್ಲಿದ್ದ ಇಬ್ಬರಿಗೂ ಗಾಯಗಳಾಗಿದ್ದು, ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕುಂಸಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.


Spread the love

LEAVE A REPLY

Please enter your comment!
Please enter your name here