ಬೆಂಗಳೂರು ಗ್ರಾ. ಜಿಲ್ಲೆ ನೆಲಮಂಗಲ ತಾಲೂಕಿನ ಕುಲುವನಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಅಪರಿಚಿತ ವಾಹನ-ಕಾರಿನ ನಡುವೆ ಡಿಕ್ಕಿ ಸಂಭವಿಸಿದ್ದು ಯುಟ್ಯೂಬರ್ ಮೃತಪಟ್ಟಿದ್ದಾರೆ.
ಬೆಂಗಳೂರು ಕಡೆಯಿಂದ ತುಮಕೂರು ಕಡೆ ಹೋಗುತ್ತಿದ್ದ ಸ್ವಿಫ್ಟ್ ಕಾರಿನಲ್ಲಿದ್ದ ಯುಟ್ಯೂಬರ್ ವೆಂಕಟೇಶ್(43) ಪ್ರಾಣ ಕಳೆದುಕೊಂಡಿದ್ದಾರೆ.
ಸಂಚಾರಿ ಪೊಲೀಸರಿಂದ ಅಪರಿಚಿತ ವಾಹನಕ್ಕೆ ಶೋಧ ನಡೆಯುತ್ತಿದೆ. ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.