ವಿಜಯಸಾಕ್ಷಿ ಸುದ್ದಿ, ನರೇಗಲ್ಲ: ಸಮೀಪದ ನಿಡಗುಂದಿಕೊಪ್ಪ ಶಾಖಾ ಶಿವಯೋಗ ಮಂದಿರದ ಲಿಂ. ಚನ್ನಬಸವ ಸ್ವಾಮೀಜಿಗಳ 42ನೇ ಹಾಗೂ ಲಿಂ. ಶಿವಬಸವ ಸ್ವಾಮೀಜಿಗಳ 10ನೇ ಪುಣ್ಯಸ್ಮರಣೋತ್ಸವ ಸಮಾರಂಭವನ್ನು ಜ. 3ರಂದು ಹಮ್ಮಿಕೊಳ್ಳಲಾಗಿದೆ.
ಹಾಲಕೆರೆ ಸಂಸ್ಥಾನಮಠದ ಮುಪ್ಪಿನ ಬಸವಲಿಂಗ ಸ್ವಾಮೀಜಿ, ಹಾವೇರಿ ಹುಕ್ಕೇರಿಮಠದ ಸದಾಶಿವ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ರೋಣ ಗುಲಗಂಜಿಮಠದ ಗುರುಪಾದ ಸ್ವಾಮೀಜಿ, ಶಾಖಾ ಶಿವಯೋಗಮಂದಿರದ ಅಭಿನವ ಚನ್ನಬಸವ ಸ್ವಾಮೀಜಿ ನೇತೃತ್ವ ವಹಿಸುವರು. ಶಾಸಕ ಜಿ.ಎಸ್. ಪಾಟೀಲ, ಮಾಜಿ ಸಚಿವ ಕಳಕಪ್ಪ ಬಂಡಿ, ವಿ.ಪ. ಸದಸ್ಯ ಎಸ್.ವಿ. ಸಂಕನೂರ, ಕ್ಷೇತ್ರ ಶಿಕ್ಷಣಾಧಿಕಾರಿ ಎ.ಎನ್. ಕಾಂಬೋಗಿ, ನಿವೃತ್ತ ಪ್ರಾಚಾರ್ಯ ಶೇಖರಪ್ಪ ಕಲಕಬಂಡಿ, ವೀರಣ್ಣ ಸೊಬಗಿನ, ಆನಂದ ಕೊಪ್ಪದ, ರುದ್ರಪ್ಪ ಬೆಲ್ಲದ ಮುಂತಾದವರು ಆಗಮಿಸಲಿದ್ದಾರೆ ಎಂದು ಶ್ರೀಮಠದ ಪ್ರಕಟಣೆ ತಿಳಿಸಿದೆ.



