ಗ್ರಾಮದ ಸಮಗ್ರ ಅಭಿವೃದ್ಧಿಗೆ ಬದ್ಧ

0
rona
Spread the love

ವಿಜಯಸಾಕ್ಷಿ ಸುದ್ದಿ, ರೋಣ : ಮುಗುಳಿ ಗ್ರಾಮದಲ್ಲಿ 1 ಕೋಟಿ 60 ಲಕ್ಷ ರೂ. ವೆಚ್ಚದಲ್ಲಿ ಪ್ರೌಢಶಾಲೆಯ 10 ಕೊಠಡಿಗಳನ್ನು ನಿರ್ಮಿಸಲಾಗುವುದು ಎಂದು ಶಾಸಕ, ರಾಜ್ಯ ಖನಿಜ ನಿಗಮದ ಅಧ್ಯಕ್ಷ ಜಿ.ಎಸ್. ಪಾಟೀಲ ಹೇಳಿದರು.

Advertisement

ಅವರು ಬುಧವಾರ ತಾಲೂಕಿನ ಮುಗುಳಿ ಗ್ರಾಮದಲ್ಲಿ ನೂತನ ಪ್ರೌಢಶಾಲೆಯ ಶಾಲಾ ಕೊಠಡಿ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.

ಮತಕ್ಷೇತ್ರದಲ್ಲಿ ಮಕ್ಕಳು ಅಕ್ಷರ ಜ್ಞಾನದಿಂದ ವಂಚಿತರಾಗಬಾರದು ಎಂಬ ಉದ್ದೇಶದಿಂದ ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಪ್ರಮುಖ ಆದ್ಯತೆ ನೀಡಲಾಗುತ್ತಿದೆ. ಸರಕಾರ ಶೈಕ್ಷಣಿಕ ಪ್ರಗತಿಗೆ ಅನೇಕ ಮಹತ್ತರವಾದ ಯೋಜನೆಗಳನ್ನು ಜಾರಿಗೆ ತರುವ ಮೂಲಕ ಬಡ ಮಕ್ಕಳ ಶಿಕ್ಷಣಕ್ಕೆ ನೆರವು ನೀಡುತ್ತಿದೆ. ಆದ್ದರಿಂದ ಪಾಲಕರು ಮಕ್ಕಳ ಶಿಕ್ಷಣಕ್ಕೆ ಮೊದಲ ಆದ್ಯತೆ ನೀಡಬೇಕು. ಗ್ರಾಮದ ಅನೇಕ ಕಡೆಗಳಲ್ಲಿ ಸಿಸಿ ರಸ್ತೆಯನ್ನು ನಿರ್ಮಿಸಬೇಕು ಎಂಬುದು ಗ್ರಾಮಸ್ಥರ ಇಚ್ಛೆಯಾಗಿತ್ತು. ಹೀಗಾಗಿ ಗ್ರಾಮದಲ್ಲಿ ಸಿಸಿ ರಸ್ತೆಗಳನ್ನು ನಿರ್ಮಿಸಲು 50 ಲಕ್ಷ ರೂ.ಗಳ ಅನುದಾನ ಮಂಜೂರಾಗಿದ್ದು, ಶೀಘವ್ರೇ ಕಾಮಗಾರಿಗೆ ಚಾಲನೆ ನೀಡಲಾಗುವುದು. ಜೊತೆಗೆ ಡಾ. ಬಿ.ಆರ್. ಅಂಬೇಡ್ಕರ ನಗರದಲ್ಲಿ 20 ಲಕ್ಷ ರೂ.ಗಳ ವೆಚ್ಚದಲ್ಲಿ ಸಮುದಾಯ ಭವನ ನಿರ್ಮಿಸಲು ಅನುದಾನವನ್ನು ನೀಡಲಾಗುತ್ತಿದ್ದು, ಮುಗುಳಿ ಗ್ರಾಮದ ಸಮಗ್ರ ಅಭಿವೃದ್ಧಿಗೆ ಶ್ರಮಿಸಲಾಗುವುದು ಎಂದರು.

ಇದೇ ಸಂಧರ್ಭದಲ್ಲಿ ಶಾಸಕ ಜಿ.ಎಸ್. ಪಾಟೀಲ ಹಾಗೂ ಪ್ರೌಢಶಾಲಾ ನಿರ್ಮಾಣಕ್ಕೆ ಭೂದಾನ ಮಾಡಿದ ಗುರುಬಸ್ಸಮ್ಮ ಹಿರೇಮಠರವರನ್ನು ಗ್ರಾಮಸ್ಥರು ಸನ್ಮಾನಿಸಿದರು. ಗ್ರಾ.ಪಂ ಅಧ್ಯಕ್ಷೆ ಭೀಮವ್ವ ಗುಳಗುಳಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಡಿಡಿಪಿಐ ಎಂ.ಎಸ್. ರಡ್ಡೇರ, ತಾ.ಪಂ ಇಒ ರವಿ ಎ.ಎನ್., ಬಿಇಒ ರುದ್ರಪ್ಪ ಹುರಳಿ, ಪಿ.ಬಿ. ಅಳಗವಾಡಿ, ಬಸವರಾಜ ನವಲಗುಂದ, ವ್ಹಿ.ಬಿ. ಸೋಮನಕಟ್ಟಿಮಠ, ಎಂ.ಎಸ್. ದೇಸಾಯಿ, ಕಾರ್ಯನಿರ್ವಾಹಕ ಅಧಿಕಾರಿ ಬಲರಾಮ್ ನಾಯಕ, ಎಂ.ಎ. ಫಣಿಬಂದ್ ಸೇರಿದಂತೆ ಎಸ್‌ಡಿಎಂಸಿ ಅಧ್ಯಕ್ಷರು, ಸದಸ್ಯರು, ಮುಖಂಡರು ಪಾಲ್ಗೊಂಡಿದ್ದರು.

 

ರೋಣ ಮತಕ್ಷೇತ್ರ ಸೇರಿದಂತೆ ಜಿಲ್ಲೆಯ ಮಕ್ಕಳು ಅಕ್ಷರ ಜ್ಞಾನದಿಂದ ದೂರ ಉಳಿಯಬಾರದು. ಗ್ರಾಮೀಣ ಭಾಗಗಳ ಮಕ್ಕಳು ಉನ್ನತ ವ್ಯಾಸಾಂಗವನ್ನು ಪಡೆಯಬೇಕು ಎಂಬ ಉದ್ದೇಶದಿಂದ ಸರಕಾರ ೨೫ ಹೊಸ ಪ್ರೌಢಶಾಲೆಗಳ ನಿರ್ಮಾಣಕ್ಕೆ ಅನುಮತಿ ನೀಡಿದೆ. ಕ್ಷೇತ್ರದ ಅನೇಕ ಗ್ರಾಮಗಳಲ್ಲಿ ಪ್ರೌಢಶಾಲೆಗಳನ್ನು ಆರಂಭಿಸಲು ಅಗತ್ಯ ಕ್ರಮ ತೆಗೆದುಕೊಳ್ಳಲಾಗುವುದು.
– ಜಿ.ಎಸ್. ಪಾಟೀಲ.
ಶಾಸಕರು, ರೋಣ.


Spread the love

LEAVE A REPLY

Please enter your comment!
Please enter your name here