ಬೆಂಗಳೂರು: ಮದುವೆಯಾಗೋದಾಗಿ ನಂಬಿಸಿ, ನನ್ನನ್ನು ಲೈಂಗಿಕವಾಗಿ ಬಳಸಿಕೊಂಡಿದ್ದಾನೆ ಎಂದು ಆರೋಪಿಸಿ ಪ್ರಭು ಚೌಹಾಣ್ ಪುತ್ರ ಪ್ರತೀಕ್ ಚೌಹಾಣ್ ವಿರುದ್ಧ ಯುವತಿಯೊಬ್ಬಳು ದೂರು ನೀಡಿದ್ದಾಳೆ. ಮಹಿಳಾ ಆಯೋಗಕ್ಕೆ ಪ್ರತೀಕ್ ಚೌಹಾಣ್ ವಿರುದ್ಧ ದೂರು ಸಲ್ಲಿಕೆಯಾಗಿದೆ.
ಮದುವೆ ಯಾಗೋದಾಗಿ ನಂಬಿಸಿ ಮೋಸ ಮಾಡಿದ್ದು, ಲೈಂಗಿಕವಾಗಿಯೂ ಬಳಸಿಕೊಂಡಿದ್ದಾಗಿ ಯುವತಿ ಆರೋಪಿಸಿದ್ದಾಳೆ. 2023ರ ಡಿಸೆಂಬರ್ 25ರಂದು ಪೋಷಕರು ನಿಶ್ಚಿತಾರ್ಥ ಮಾಡಿದ್ದರು. ನಿಶ್ಚಿತಾರ್ಥದ ನಂತರ ಪ್ರತೀಕ್ ಜೊತೆ ಹೊಂದಾಣಿಕೆಗಾಗಿ ಬೇರೆ ಸ್ಥಳಗಳಿಗೆ ಕಳಿಸಿ ಕೊಟ್ಟಿದ್ದರು. ಅದರಂತೆ ಪ್ರತೀಕ್ ಮಹಾರಾಷ್ಟ್ರದ ಲಾತೂರ್ ಗೆ ಕರೆದುಕೊಂಡು ಹೋಗಿದ್ದು,
ಆ ವೇಳೆ ಪ್ರತೀಕ್ ಚೌಹಾಣ್ ಒತ್ತಾಯಪೂರ್ವಕವಾಗಿ ನನ್ನನ್ನು ಲೈಂಗಿಕವಾಗಿ ಬಳಸಿಕೊಂಡಿದ್ದಾನೆ. ನಂತರ ಮದುವೆಗೆ ಒತ್ತಾಯ ಮಾಡಿದ್ರೆ ಮುಂದೂಡಿದ್ದಾರೆ. ಸಾಲದಕ್ಕೆ ಅವರ ಮನೆಗೆ ಹೋಗಿ ನನ್ನ ಪೋಷಕರು ಕೇಳಿದ್ರೆ ಗಲಾಟೆ ಮಾಡಿದ್ದು, ನಮ್ಮ ಮನೆಯವರನ್ನ ಬಡವರು ಎಂದು ಹೀಯಾಳಿಸಿದ್ದಾರೆ.
ಈ ಕುರಿತು 2025ರ ಜುಲೈ 6ರಂದು ಔರಾದ್ನ ಹೋಕ್ರಾಣ್ ಠಾಣೆಗೆ ದೂರು ಕೊಡಲು ಹೋಗಿದ್ವಿ. ಆದ್ರೆ, ಪೊಲೀಸರು ದೂರನ್ನ ಸ್ವೀಕಾರ ಮಾಡಿಲ್ಲ ಎಂದು ಆರೋಪಿಸಿದ್ದಾಳೆ. ಮಹಾರಾಷ್ಟ್ರದ ಉದ್ದಗೀರ್ ಯುವತಿಯೊಂದಿಗೆ ಪ್ರಭು ಚೌಹಾಣ್ ಮಗ ಪ್ರತೀಕ್ ಚೌಹಾಣ್ನೊಂದಿಗೆ ನಿಶ್ಚಿತಾರ್ಥವಾಗಿದ್ದು, ಕೆಲ ದಿನಗಳಿಂದ ಅಷ್ಟೇ ಮದುವೆ ಲೇಟಾದ ವಿಚಾರಕ್ಕೆ ಎರಡು ಕಡೆಯವರ ನಡುವೆ ಮಾತಿಗೆ ಮಾತು ಬೆಳೆದು ಗಲಾಟೆಯಾಗಿತ್ತು.
ಘಟನೆ ವಿಕೋಪಕ್ಕೆ ತಿರುಗಿ ಸಂಬಂಧಿಕರು ಹೊಡೆದಾಡಿಕೊಂಡಿದ್ದರು. ಆ ವೇಳೆ ಶಾಸಕ ಪ್ರಭು ಚೌಹಾಣ್ ಒಬ್ಬರಿಗೆ ಕಾಪಾಳಕ್ಕೆ ಬಾರಿಸಿದ್ದು, ಗಲಾಟೆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಇದೀಗ ಅದೇ ಪ್ರಕರಣ ಸಂಬಂಧ ನಿಶ್ಚಿತಾರ್ಥ ಮಾಡಿಕೊಂಡು ಮದುವೆ ಮಾಡಿಕೊಳ್ಳದೇ ಮೋಸ ಮಾಡಿದ್ದಕ್ಕೆ ಯುವತಿ, ಭು ಚೌಹಾಣ್ ಮಗ ಪ್ರತೀಕ್ ಚೌಹಾಣ್ ವಿರುದ್ಧ ಮಹಿಳಾ ಆಯೋಗಕ್ಕೆ ದೂರು ನೀಡಲಾಗಿದೆ.



