ಭಾರತೀಯ ಯೋಧರಿಗೆ ತೋಂಟದ ಶ್ರೀ ಅಭಿನಂದನೆ

0
Spread the love

ವಿಜಯಸಾಕ್ಷಿ ಸುದ್ದಿ, ಗದಗ: ಇತ್ತೀಚೆಗೆ ಕಾಶ್ಮೀರದ ಪಹಲ್ಗಾಮ್‌ದಲ್ಲಿ ಪ್ರವಾಸಿಗರ ಮೇಲೆ ನಡೆದ ಉಗ್ರವಾದಿಗಳ ದಾಳಿಗೆ ಪ್ರತೀಕಾರವಾಗಿ ಭಾರತೀಯ ಯೋಧರು ಉಗ್ರರ 9 ನೆಲೆಗಳ ಮೇಲೆ ದಾಳಿ ನಡೆಸಿ ಉಗ್ರರ ಸದ್ದಡಗಿಸಿರುವುದು ಅಭಿನಂದನೀಯ ಸಂಗತಿ. ಭಾರತವು ಶಾಂತಿಪ್ರಿಯ ದೇಶವಾಗಿದ್ದರೂ ಈ ದೇಶದ ಶಾಂತಿ ಮತ್ತು ಸುವ್ಯವಸ್ಥೆಯನ್ನು ಕದಡುವ ಉಗ್ರರ ಹೀನ ಕೃತ್ಯಕ್ಕೆ ಪ್ರತಿಯಾಗಿ ಭಾರತೀಯ ಸೇನೆ ಆಪರೇಷನ್ ಸಿಂಧೂರ ಮೂಲಕ ಉಗ್ರರ ನೆಲೆಗಳನ್ನು ಪತ್ತೆ ಹಚ್ಚಿ ದಾಳಿ ನಡೆಸಿ ತಕ್ಕ ಉತ್ತರ ನೀಡಿದ್ದಾರೆ ಎಂದು ಡಂಬಳ-ಗದಗ ಜಗದ್ಗುರು ತೋಂಟದಾರ್ಯ ಸಂಸ್ಥಾನಮಠದ ಡಾ. ತೋಂಟದ ಸಿದ್ಧರಾಮ ಮಹಾಸ್ವಾಮಿಗಳು ಅಭಿನಂದಿಸಿದ್ದಾರೆ.

Advertisement

ಸಮಸ್ತ ಭಾರತೀಯರು ಜಾತಿ, ಧರ್ಮ, ಪಕ್ಷ ಮತ್ತು ಪ್ರದೇಶಗಳ ಭೇದ ಮರೆತು ಭಾರತೀಯ ಸೇನೆಗೆ ಬೆಂಬಲ ವ್ಯಕ್ತಪಡಿಸಿರುವುದು ಈ ದೇಶದ ಐಕ್ಯತೆ ಹಾಗೂ ಸಮಗ್ರತೆಗೆ ಸಾಕ್ಷಿಯಾಗಿದೆ. ಇದು ನಮ್ಮ ಯೋಧರ ಬಲವನ್ನು ಹೆಚ್ಚಿಸಿದೆ ಎಂದು ತಿಳಿಸಿ, ಭಾರತೀಯ ಸೇನೆಯ ಯೋಧರನ್ನು ಹೃತ್ಪೂರ್ವಕವಾಗಿ ಅಭಿನಂದಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here