HomeGadag Newsಆರ್‌ಸಿಬಿ ತಂಡಕ್ಕೆ ಅಭಿನಂದನೆ

ಆರ್‌ಸಿಬಿ ತಂಡಕ್ಕೆ ಅಭಿನಂದನೆ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಗದಗ: ಮಂಗಳವಾರ ನಡೆದ ಆರ್‌ಸಿಬಿ ಹಾಗೂ ಪಂಜಾಬ್ ನಡುವಿನ ಐಪಿಎಲ್ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 18 ವರ್ಷಗಳ ಪ್ರಯತ್ನದ ಬಳಿಕ ಭರ್ಜರಿಯಾಗಿ ಗೆದ್ದಿದೆ. ಪ್ರಪಂಚದಲ್ಲಿ ಅತ್ಯಂತ ಜನಪ್ರಿಯ ಹಾಗೂ ಬೃಹತ್ ಸಂಖ್ಯೆಯ ಅಭಿಮಾನಿಗಳನ್ನು ಹೊಂದಿರುವ ಕರ್ನಾಟಕದ ಆರ್‌ಸಿಬಿ ತಂಡವನ್ನು ಗದಗ ಜಿಲ್ಲಾ ಅಖಿಲ ಕರ್ನಾಟಕ ಮುಸ್ಲಿಂ ಮಹಾಸಭಾದ ಯುವ ಘಟಕದ ಅಧ್ಯಕ್ಷ ಯಾಸೀನ್ ಅ.ಮುಲ್ಲಾ ಅಭಿನಂದಿಸಿದ್ದಾರೆ.

ಗದಗದಲ್ಲಿ ನಡೆದ ಯುವ ಘಟಕದ ಸಾಮಾನ್ಯ ಸಭೆಯಲ್ಲಿ ಮಾತನಾಡಿದ ಅವರು, ಸುಮಾರು 18 ವರ್ಷಗಳ ಬಳಿಕ ಐಪಿಎಲ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಹೆಮ್ಮೆಯ ಆರ್‌ಸಿಬಿ ತಂಡ ಗೆಲುವಿನ ನಗೆ ಬೀರಿದ್ದು, ಸಹಸ್ರಾರು ಸಂಖ್ಯೆಯ ಅಭಿಮಾನಿಗಳಿಗೆ ಹಬ್ಬವನ್ನೇ ತಂದಿದೆ ಎಂದರು.

ಈ ಸಂದರ್ಭದಲ್ಲಿ ಗದಗ ಜಿಲ್ಲಾ ಯುವ ಘಟಕದ ಉಪಾಧ್ಯಕ್ಷ ಅಫ್ಜಲ್ ಮನಿಯಾರ್, ತಾಲುಕು ಘಟಕದ ಅಧ್ಯಕ್ಷ ಇನ್ನುಸ್ ಮುಲ್ಲಾದರವೇಶ, ಯಾಸೀನ್ ಖವಾಸ್, ಯೂಸುಫ್ ಇಲ್ಲಾಳ, ಅಬ್ದುಲ್ ಮುನಾಫ್ ಸೈಯದ್, ಸೊಹೈಲ್ ಹಣಗಿ, ರಶೀದ್ ಖವಾಸ್ ಮುಂತಾದವರು ಉಪಸ್ಥಿತರಿದ್ದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!