ವಿಜಯಸಾಕ್ಷಿ ಸುದ್ದಿ, ನರೇಗಲ್ಲ: ಕಳೆದ ಜ.29ರಿಂದ ಫೆ. 8ರವರೆಗೆ ನಡೆದ ಕೋಡಿಕೊಪ್ಪದ ಹಠಯೋಗಿ ಶ್ರೀ ವೀರಪ್ಪಜ್ಜನವರ ಮಹಾಗಣಾರಾಧನೆಯ ಶತಮಾನೋತ್ಸವ ಮತ್ತು ಮಹಾರಥೋತ್ಸವದ ಸಂದರ್ಭದಲ್ಲಿ ಶ್ರಮಿಸಿ, ಸಹಕರಿಸಿದ ಸರ್ವರಿಗೂ ಶ್ರೀಮಠದ ವತಿಯಿಂದ ಅಭಿನಂದನಾ ಸಮಾರಂಭವನ್ನು ಮಾ. 23ರ ಬೆಳಿಗ್ಗೆ 10.30ಕ್ಕೆ ಶ್ರೀಮಠದ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಡಾ. ಎಲ್.ಎಸ್. ಗೌರಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಭಿನಂದನಾ ಸಮಾರಂಭದ ದಿವ್ಯ ಸಾನ್ನಿಧ್ಯವನ್ನು ನರೇಗಲ್ಲ ಹಿರೇಮಠದ ಷ.ಬ್ರ. ಶ್ರೀ ಮಲ್ಲಿಕಾರ್ಜುನ ಶಿವಾಚಾರ್ಯರು ವಹಿಸಲಿದ್ದಾರೆ. ಅಧ್ಯಕ್ಷತೆಯನ್ನು ಶ್ರೀ ಕೋಡಿಕೊಪ್ಪದ ಹಠಯೋಗಿ ಹುಚ್ಚೀರೇಶ್ವರ ಟ್ರಸ್ಟ್ ಕಮಿಟಿಯ ಅಧ್ಯಕ್ಷರಾದ ಡಾ. ಎಂ.ಸಿ. ಚಪ್ಪನ್ನಮಠ ವಹಿಸಲಿದ್ದಾರೆ. ಶ್ರೀಮಠದ ಸದ್ಭಕ್ತರೆಲ್ಲರೂ ಈ ಅಭಿನಂದನಾ ಸಮಾರಂಭದಲ್ಲಿ ಪಾಲ್ಗೊಂಡು, ಪ್ರಸಾದ ಸ್ವೀಕರಿಸಿ ಶ್ರೀ ವೀರಪ್ಪಜ್ಜನವರ ಕೃಪೆಗೆ ಪಾತ್ರರಾಗಬೇಕೆಂದು ಡಾ. ಗೌರಿ ವಿನಂತಿಸಿದ್ದಾರೆ.