ಗ್ಯಾರಂಟಿಗಳ ಮೂಲಕ ತೆಲಂಗಾಣ ಬಡವರಿಗೆ ಕಾಂಗ್ರೆಸ್ ಮೋಸ ಮಾಡಿದೆ: ಕೆ.ಎಸ್.ಈಶ್ವರಪ್ಪ

0
Spread the love

ಶಿವಮೊಗ್ಗ: ನಾಲ್ಕು ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಗೆಲವಿನತ್ತ ಸಾಗಿರುವುದಕ್ಕೆ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಸಂತಸ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದ ಜನತೆ ಮತ್ತೆ ಪ್ರದಾನಿಯಾಗಬೇಕು ಎಂದು ಬಯಸಿದ್ದು, ಮೂರು ರಾಜ್ಯಗಳಲ್ಲಿ ಗೆಲುವಿನ ಗಿಫ್ಟ್ ನೀಡಿದ್ದಾರೆ. ಇದು ದೇಶದ ಎಲ್ಲಾ ಕಾರ್ಯಕರ್ತರಿಗೆ ಸಂತಸ ತಂದಿದೆ. ಇಂತಹ ಸಂತಸ ಪದೇ ಪದೇ ಬರಲಿ ಮಧ್ಯ ಪ್ರದೇಶ ರಾಜಸ್ಥಾನ ಗೆಲ್ಲುತ್ತೇವೆ ಎಂಬ ವಿಶ್ವಾಸ ವಿತ್ತು. ಆದರೆ ಛತ್ತಿಸ್ ಘಡ ಗೆಲ್ಲುತ್ತೇವೆ ಎಂಬ ನಂಬಿಕೆ ಇರಲಿಲ್ಲ. ಕಾಂಗ್ರೇಸ್ ನವರು ಐದು ರಾಜ್ಯಗಳಲ್ಲಿ ಗೆಲ್ಲುತ್ತೇವೆ ಎಂದು ಹೇಳಿದ್ದರು.

ಕೇವಲ ಒಂಜು ರಾಜ್ಯದಲ್ಲಿ ಅವರು ಗೆದ್ದಿದ್ದಾರೆ. ತೆಲಂಗಾಣದಲ್ಲಿ ಮುಖ್ಯಮಂತ್ರಿಗಳ ಮೇಲೆ ಜನರಿಗಿದ್ದ ಬೇಸರ, ಗ್ಯಾರಂಟಿ ಯೋಜನೆಯಿಂದ ರಾಜ್ಯದ ಜನತದೆಗೆ ಹೇಗೆ ಮೋಸ ಮಾಡಿದರೋ..ಹಾಗೆಯೇ ಮುಸ್ಲಿಂ ಮತಗಳನ್ನು ಕ್ರೂಡಿಕರಿಸಿ ಗೆಲುವು ಸಾಧಿಸಿದ್ದಾರೆ. ಗ್ಯಾರಂಟಿಗಳ ಮೂಲಕ ತೆಲಂಗಾಣ ಬಡವರಿಗೆ ಕಾಂಗ್ರೇಸ್ ಮೋಸ ಮಾಡಿದೆ. ಮುಂದಿನ ಚುನಾವಣೆಯಲ್ಲಿ ಅವರು ತೆಲಂಗಾಣವನ್ನು ಕೂಡ ಗೆಲ್ಲಲು ಸಾಧ್ಯವಿಲ್ಲ. ಇಂದಿನ ಫಲಿತಾಂಶ ಮುಂದಿನ ಚುನಾವಣೆಗಳಲ್ಲಿ ಬರಲಿದೆ ಎಂದು ಈಶ್ವರಪ್ಪ ಹೇಳಿದ್ದಾರೆ.


Spread the love

LEAVE A REPLY

Please enter your comment!
Please enter your name here