ವಿಜಯಪುರ: ಕಾಂಗ್ರೆಸ್’ನವರಿಗೆ ಹಿಂದೂಗಳು ಬೇಕಾಗಿಲ್ಲ, ಮುಸ್ಲಿಮರು ಬೇಕಾಗಿದ್ದಾರೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು. ನಗರದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ನವರಿಗೆ ಹಿಂದೂಗಳು ಬೇಕಾಗಿಲ್ಲ, ಮುಸ್ಲಿಮರು ಬೇಕಾಗಿದ್ದಾರೆ. ಮುಸ್ಲಿಮರ ಸಲುವಾಗಿಯೇ ಕಾಂಗ್ರೆಸ್ ಪಕ್ಷ ಇದೆ, ಹಿಂದೂಗಳಿಗೆ ಅಲ್ಲ.
ದಲಿತ ಸಮುದಾಯದ ಪಿಎಸ್ಐ ಆತ್ಮಹತ್ಯೆ ಮಾಡಿಕೊಂಡರು. ದಲಿತ ಸಂಘಟನೆಗಳು ಎಲ್ಲಿದ್ದಾವೆ ಅಂತಾ ನಾನು ಕೇಳುತ್ತೇನೆ. ಕೆಲವು ಮುಖಂಡರು ಪೇಯ್ಡ್ ಸರ್ವೆಂಟ್ ಇದ್ದಾರೆ, ಪೇಟಿಎಂ ಇದ್ದಂಗೆ, ಹಣ ಹಾಕಿದ ಕೂಡಲೇ ಕೆಲ ಸಂಘಟನೆಗಳು ಮಾತಾಡುತ್ತವೆ. ಹಣ ಕಡಿಮೆ ಆಯ್ತು ಅಂದರೆ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ಅಂತಾರೆ ಎಂದು ಹೇಳಿದ್ದಾರೆ.



