HomePolitics Newsಕಾಂಗ್ರೆಸ್ ರಾಜ್ಯ ಆಳುವ ನೈತಿಕತೆ ಕಳೆದುಕೊಂಡಿದೆ : ಬೊಮ್ಮಾಯಿ

ಕಾಂಗ್ರೆಸ್ ರಾಜ್ಯ ಆಳುವ ನೈತಿಕತೆ ಕಳೆದುಕೊಂಡಿದೆ : ಬೊಮ್ಮಾಯಿ

Spread the love

ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ : ರಾಜ್ಯ ಸರ್ಕಾರ ರೈತರ ಕಿಸಾನ್ ಸಮ್ಮಾನ್, ರೈತ ವಿದ್ಯಾನಿಧಿ, ರೈತ ಶಕ್ತಿ ಯೋಜನೆ ಸ್ಥಗಿತಗೊಳಿಸಿದೆ. ಬರ ಪರಿಸ್ಥಿತಿಯಲ್ಲಿ ಯಾವುದೇ ಪರಿಹಾರ ನೀಡಿಲ್ಲ. ಕಾಂಗ್ರೆಸ್ ಸರ್ಕಾರ ರಾಜ್ಯ ಆಳುವ ನೈತಿಕತೆಯನ್ನು ಕಳೆದುಕೊಂಡಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಆರೋಪಿಸಿದರು.

ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಯಳವತ್ತಿ, ಮಾಗಡಿ, ಕಡಕೋಳ, ಬನ್ನಿಕೊಪ್ಪ, ಮಾಚೇನಹಳ್ಳಿ ಗ್ರಾಮಗಳಲ್ಲಿ ರೋಡ್‌ಶೋ ಮೂಲಕ ಮತಯಾಚನೆ ಮಾಡಿ ಅವರು ಮಾತನಾಡಿದರು.

ವಿಪಕ್ಷದವರು ಪ್ರಣಾಳಿಕೆ ಮಾಡಲಿ. ಆದರೆ, ಗ್ಯಾರಂಟಿ ಕಾರ್ಡ್ ಕೊಟ್ಟು ನಂಬಿಸಲು ಶುರುಮಾಡಿದ್ದಾರೆ. ಇದು ಕಾನೂನು ವಿರುದ್ಧ ಎಂದು ಗ್ಯಾರಂಟಿ ಕಾರ್ಡ್ ವಿರುದ್ಧ ಹರಿಹಾಯ್ದರು.

ಲೋಕಸಭೆಯಲ್ಲಿ 543 ಸ್ಥಾನಗಳಿದ್ದು, ಬಹಮತಕ್ಕೆ 232 ಸ್ಥಾನಬೇಕು. ಕಾಂಗ್ರೆಸ್ ಸ್ಪರ್ಧೆ ಮಾಡಿರುವುದೇ 230 ಸ್ಥಾನಗಳಿಗೆ. ಹೀಗಾಗಿ ಕಾಂಗ್ರೆಸ್ ಬಹುಮತ ಬರುವುದಿಲ್ಲ ಎಂದು ವಾಗ್ದಾಳಿ ನಡೆಸಿದರು.

ಪ್ರಧಾನಿ ನರೇಂದ್ರ ಮೋದಿಯವರು ಕೊವಿಡ್ ಸಂದರ್ಭದಲ್ಲಿ ದೇಶದ 130 ಕೋಟಿ ಜನರಿಗೆ ಉಚಿತ ಲಸಿಕೆ ಕೊಟ್ಟು ಪ್ರಾಣ ಉಳಿಸಿದ್ದಾರೆ. ಅಮೇರಿಕಾ ದೇಶದಲ್ಲಿ ಒಂದು ಲಸಿಗೆ 30 ಸಾವಿರ ರೂಪಾಯಿ ಇದೆ.

ಮೋದಿಯವರು ಎಲ್ಲರಿಗೂ ಉಚಿತವಾಗಿ ಮೂರು ಬಾರಿ ಲಸಿಕೆ ಕೊಟ್ಟಿದ್ದಾರೆ. ಪ್ರಾಣ ಉಳಿಸಿದ ಅವರ ಋಣವನ್ನು ಬಿಜೆಪಿಗೆ ಮತ ಹಾಕುವ ಮೂಲಕ ತೀರಿಸಬೇಕು. ನಾನು ಈ ಕ್ಷೇತ್ರದ ಸಂಸದನಾಗಿ ಆಯ್ಕೆಯಾಗಿ ಈ ಭಾಗಕ್ಕೆ ಅನುಕೂಲವಾಗುವ ನೀರಾವರಿ ಯೋಜನೆ, ಕೈಗಾರಿಕೆಗಳನ್ನು ತರುವ ಪ್ರಯತ್ನ ಮಾಡುತ್ತೇನೆ. ಕ್ಷೇತ್ರದ ಜನರ ಧ್ವನಿಯಾಗಿ ಸಂಸತ್ತಿನಲ್ಲಿ ನಿಲ್ಲುತ್ತೇನೆ ಎಂದರು.

ಪ್ರಚಾರದ ಸಂದರ್ಭದಲ್ಲಿ ಶಿರಹಟ್ಟಿ ಶಾಸಕ ಚಂದ್ರು ಲಮಾಣಿ ಸೇರಿದಂತೆ ಸ್ಥಳೀಯ ಮುಖಂಡರು ಹಾಜರಿದ್ದರು.


Spread the love

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!