ಕಾಂಗ್ರೆಸ್’ನವರು ಹಾಸನದಲ್ಲಿ ಸುಳ್ಳು ಹೇಳಿಕೊಂಡು ರಾಜಕಾರಣ ಮಾಡುತ್ತಿದ್ದಾರೆ: ಹೆಚ್.ಡಿ ರೇವಣ್ಣ ಕಿಡಿ

0
Spread the love

ಹಾಸನ: ಕಾಂಗ್ರೆಸ್‍’ನವರು ಹಾಸನದಲ್ಲಿ ಸುಳ್ಳು ಹೇಳಿಕೊಂಡು ರಾಜಕಾರಣ ಮಾಡುತ್ತಿದ್ದಾರೆ ಎಂದು ಮಾಜಿ ಸಚಿವ ಹೆಚ್.ಡಿ ರೇವಣ್ಣ ಕಿಡಿಕಾರಿದ್ದಾರೆ. ಹಾಸನದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‍ನವರು ಹಾಸನ – ಮೈಸೂರು ರೈಲ್ವೆ ಯೋಜನೆ ಸ್ಥಗಿತ ಮಾಡಿದ್ದರು. ಆದರೆ ದೇವೇಗೌಡರು ಪ್ರಧಾನಿಯಾಗಿ ಹತ್ತೆ ತಿಂಗಳಿಗೆ ಆ ಯೋಜನೆ ಮಾಡಿದ್ರು.

Advertisement

ಕಾಂಗ್ರೆಸ್‍ನವರು ಈ ಜಿಲ್ಲೆಯಲ್ಲಿ ಸುಳ್ಳು ಹೇಳಿಕೊಂಡು ರಾಜಕಾರಣ ಮಾಡುತ್ತಿದ್ದಾರೆ. ಈ ಜಿಲ್ಲೆ ಲೂಟಿಕೋರರ ಕೈ ಸೇರಿದೆ. ನಾನೂ ಇಲ್ಲೇ ಇರ್ತಿನೆ, ಇದೆಲ್ಲಾ ಎಷ್ಟು ದಿನ ಇರುತ್ತದೆ ನೋಡೋಣ. ಈ ದೇಶ ಉಳಿಯಬೇಕಾದರೆ ಮೋದಿಯವರು ಇರಲೇಬೇಕು. ಅವರಿಗೆ ನಮ್ಮ ಪಕ್ಷದ ಸಂಪೂರ್ಣ ಬೆಂಬಲ ಇದೆ ಎಂದಿದ್ದಾರೆ.

ಕೆಲವು ಅಧಿಕಾರಿಗಳು ರೇವಣ್ಣ ಹಾಗೂ ದೇವೇಗೌಡರದು ಮುಗೀತು ಎಂದು ತಿಳಿದುಕೊಂಡಿದ್ದಾರೆ. ಹಿಂದೆ ಕೂಡ ಜಿಲ್ಲೆಯಲ್ಲಿ ಎಲ್ಲಾ ಸ್ಥಾನ ಸೋತಿದ್ದೆವು. ಬಳಿಕ ಐದೇ ವರ್ಷಕ್ಕೆ ದೇವೇಗೌಡರು ಅಧಿಕಾರಕ್ಕೆ ಬಂದಿದ್ದರು. ಹಾಸನಕ್ಕೆ ದೇವೇಗೌಡರ ಕೊಡುಗೆ ಏನು ಅಂತಾರೆ. ರೈಲ್ವೆ ಯೋಜನೆ, ಇಂಜಿನಿಯರಿಂಗ್, ಮೆಡಿಕಲ್ ಕಾಲೇಜು, ನಸಿರ್ಂಗ್ ಕಾಲೇಜು ಮಾಡಿದ್ದು ಯಾರು? ಹಾಸನ ಜಿಲ್ಲೆಯ ಶಿಕ್ಷಣಕ್ಕೆ ಕುಮಾರಸ್ವಾಮಿ ಐದು ಸಾವಿರ ಕೋಟಿ ರೂ. ಕೊಟ್ಟಿದ್ರು ಎಂದಿದ್ದಾರೆ.


Spread the love

LEAVE A REPLY

Please enter your comment!
Please enter your name here