ಮಂಡ್ಯ: ಐಶ್ವರ್ಯಗೌಡ ಮೋಸದ ಜಾಲಕ್ಕೆ ಕಾಂಗ್ರೆಸ್ʼನ ಮುಖಂಡರು ಬೆನ್ನೆಲುಬಾಗಿ ನಿಂತಿದ್ದಾರೆ ಎಂದು ಮಾಜಿ ಶಾಸಕ ಅನ್ನದಾನಿ ಆರೋಪ ಮಾಡಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಐಶ್ವರ್ಯಗೌಡ ಮೂಲತಃ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಕಿರುಗಾವಲು ಗ್ರಾಮದವರು.
Advertisement
ಈಕೆ ಮಂಡ್ಯ ಜಿಲ್ಲೆಯಲ್ಲೂ ಹಲವರಿಗೆ ಕೋಟ್ಯಂತರ ರೂಪಾಯಿ ವಂಚನೆ ಮಾಡಿದ್ದಾರೆ. ಅಮಾಯಕರನ್ನ ನಂಬಿಸಿ ಅವರಿಗೆ ಮೋಸ ಮಾಡಿದ್ದಾರೆ. ಈಕೆಯ ಈ ಮೋಸದ ಜಾಲಕ್ಕೆ ಕಾಂಗ್ರೆಸ್ನ ಒಂದಷ್ಟು ಮುಖಂಡರು ಬೆನ್ನೆಲುಬಾಗಿ ನಿಂತಿದ್ದಾರೆ ಎಂದು ಹೇಳಿದ್ದಾರೆ.
ಇನ್ನೂ ಈ ಹಿಂದೆ ಸಾಕಷ್ಟು ಜನ ಐಶ್ವರ್ಯಗೌಡ ವಿರುದ್ಧ ವಂಚನೆಯ ಸಂಬಂಧ ದೂರು ನೀಡಲು ಪೊಲೀಸ್ ಠಾಣೆಗೆ ಹೋಗಿದ್ದರು. ಆದ್ರೆ ಪೊಲೀಸರು ದೂರನ್ನು ಸ್ವೀಕಾರ ಮಾಡಿಯೇ ಇಲ್ಲ. ಇದಕ್ಕೆ ಐಶ್ವರ್ಯಗೌಡ ಹಿಂದಿರುವ ಕಾಂಗ್ರೆಸ್ ನಾಯಕರು ಕಾರಣ ಎಂದು ಹೇಳಿದ್ದಾರೆ.