ಬಿವೈ ವಿಜಯೇಂದ್ರಗೆ ರಾಜ್ಯಾಧ್ಯಕ್ಷ ಪಟ್ಟ- ವ್ಯಂಗ್ಯಭರಿತ ವಿಷ್ ಮಾಡಿದ ಕಾಂಗ್ರೆಸ್

0
Spread the love

ಬೆಂಗಳೂರು:- ಬಿಜೆಪಿಯ ನೂತನ ರಾಜ್ಯಾಧ್ಯಕ್ಷರಾಗಿ ಆಯ್ಕೆ ಆಗಿರುವ ವಿಜಯೇಂದ್ರ ಅವರಿಗೆ ಸಾಮಾಜಿಕ ಜಾಲತಾಣಗಳಲ್ಲಿ ರಾಜ್ಯ ಕಾಂಗ್ರೆಸ್​ ಘಟಕ ವ್ಯಂಗ್ಯಭರಿತವಾಗಿ ಶುಭಾಶಯ ಕೋರಿದೆ. ಬಿಜೆಪಿಯಲ್ಲಿ ಕುಟುಂಬ ರಾಜಕಾರಣವಿಲ್ಲ ಎಂಬ ಸುಳ್ಳನ್ನು ನಂಬಬೇಕು ಎಂದು ಟೀಕಿಸಿದೆ. ಯಡಿಯೂರಪ್ಪನವರ ಮಗ ಎಂಬ ಅರ್ಹತೆಯಲ್ಲಿ ಬಿಜೆಪಿಯ ನೂತನ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ವಿಜಯೇಂದ್ರ ಅವರಿಗೆ ಅಭಿನಂದನೆಗಳು. ಬಿಜೆಪಿಯಲ್ಲಿ ಕುಟುಂಬ ರಾಜಕಾರಣವಿಲ್ಲ ಎಂಬ ಸುಳ್ಳನ್ನು ನಂಬಬೇಕು ಎಂದು ರಾಜ್ಯದ ಜನರಲ್ಲಿ ಮನವಿ ಮಾಡುತ್ತೇವೆ ಎಂದು ವ್ಯಂಗ್ಯಭರಿತವಾಗಿ ಶುಭಾಶಯ ಕೋರಿದೆ.

Advertisement

ಇತ್ತ ರಾಜ್ಯ ಕಾಂಗ್ರೆಸ್​ ಘಟಕದ ಟ್ವೀಟ್​ಗೆ ಸಾಮಾಜಿಕ ಜಾಲತಾಣದಲ್ಲಿ ಪರ-ವಿರೋಧದ ಚರ್ಚೆ ನಡೆಯುತ್ತಿದ್ದು, ದಶಕಗಳಿಂದ ಒಂದು ಕುಟುಂಬಕ್ಕೆ ಜೀತ ಮಾಡುತ್ತಿರುವ ಪಕ್ಷದ ರಾಜ್ಯ ಘಟಕವೊಂದು ಈ ಮಾತು ಆಡುತ್ತಿರುವುದನ್ನೂ ನಂಬಬೇಕು ಎಂದು ನೆಟ್ಟಿಗರು ತಿರುಗೇಟು ನೀಡಿದ್ದಾರೆ.


Spread the love

LEAVE A REPLY

Please enter your comment!
Please enter your name here