ನಟಿ ರನ್ಯಾಗೆ ಕಾಂಗ್ರೆಸ್ ಸಚಿವರ ಬೆಂಬಲ ಆರೋಪ: ಬಿಜೆಪಿಗೆ ಟಕ್ಕರ್ ಕೊಟ್ಟ ಮಾಗಡಿ ಶಾಸಕ!

0
Spread the love

ರಾಮನಗರ:- ಗೋಲ್ಡ್ ಸ್ಮಗ್ಲಿಂಗ್ ಕೇಸ್ ನಲ್ಲಿ ಬಂಧಿತರಾಗಿರುವ ನಟಿ ರನ್ಯಾಗೆ ಕಾಂಗ್ರೆಸ್ ಸಚಿವರ ಬೆಂಬಲವಿದೆ ಎಂಬ ಬಿಜೆಪಿ ಆರೋಪಕ್ಕೆ ಮಾಗಡಿ ಶಾಸಕ ಹೆಚ್.ಸಿ.ಬಾಲಕೃಷ್ಣ ತಿರುಗೇಟು ನೀಡಿದ್ದಾರೆ.

Advertisement

ಈ ಸಂಬಂಧ ಮಾತನಾಡಿದ ಅವರು, ನಟಿ ರನ್ಯಾಗೆ ಈ ಹಿಂದೆ KIADB ಜಾಗ ಕೊಟ್ಟಿದ್ದೇ ಬಿಜೆಪಿ, ಈಗ ಕಾಂಗ್ರೆಸ್ ಮೇಲೆ ಆರೋಪ ಮಾಡೋ ನೈತಿಕತೆ ಅವರಿಗಿಲ್ಲ.

ಯಾರಾದ್ರೂ ಬಂದು ಸಹಕಾರ ಕೇಳ್ತಾರೆ. ಸಹಾಯ ಕೇಳಿಕೊಂಡು ಬಂದಾಗ ಯಾರು ಕಳ್ರು, ಯಾರು ಒಳ್ಳೆಯವರು ಗೊತ್ತಾಗಲ್ಲ. ಅವರು ಕದ್ದು ಸಿಕ್ಕಿಬಿದ್ದ ಮೇಲೆ ಕಳ್ಳರು ಅಂತ ಗೊತ್ತಾಗೋದು. ಆ ನಟಿಗೆ ಜಾಗ ಕೊಟ್ಟ ಬಿಜೆಪಿಗೆ ನಮ್ಮ ಮೇಲೆ ಆರೋಪ ಮಾಡುವ ನೈತಿಕತೆ ಇಲ್ಲ.

ಈ ವಿಚಾರದಲ್ಲಿ ರಾಜಕೀಯ ಮಾಡ್ತಿದ್ದಾರೆ. ಅವರು ರಾಜಕೀಯಕ್ಕೆ ಬಂದಿರೋದು ಅಭಿವೃದ್ಧಿ ಮಾಡೋಕಲ್ಲ. ಕೇವಲ ಕ್ಷುಲ್ಲಕ ರಾಜಕಾರಣ ಮಾಡೊದಕ್ಕೆ ಅಷ್ಟೇ ಎಂದು ಬಿಜೆಪಿ ನಾಯಕರ ಆರೋಪಕ್ಕೆ ಹೆಚ್.ಸಿ ಬಾಲಕೃಷ್ಣ ಟಾಂಗ್ ನೀಡಿದ್ದಾರೆ.

ಇನ್ನೂ ರಾಜ್ಯ ಬಜೆಟ್ ವಿರುದ್ಧ ಬಿಜೆಪಿ ಪ್ರತಿಭಟನೆ ನಡೆಸಿದ ವಿಚಾರ ಕುರಿತು ಮಾತನಾಡಿದ ಅವರು, ಅಲ್ಪಸಂಖ್ಯಾತರಿಗೆ ಅನುದಾನ ಕೊಟ್ಟಿದ್ದಕ್ಕೆ ಬಿಜೆಪಿಯವ್ರು ಪ್ರತಿಭಟನೆ ಮಾಡಿದ್ದಾರೆ. ಅಲ್ಪಸಂಖ್ಯಾತರಿಗೆ ಕೊಟ್ಟಿರೋದು 4 ಸಾವಿರ ಕೋಟಿ, ನಮ್ಮ ಬಜೆಟ್ ಗಾತ್ರ 4 ಲಕ್ಷ ಕೋಟಿ. ಕೇವಲ ಒಂದು ಪರ್ಸೆಂಟ್ ಅಷ್ಟೇ ಕೊಟ್ಟಿದ್ದಕ್ಕೆ ಇವರಿಗೆ ಸಹಿಸಲು ಆಗ್ತಿಲ್ಲ. ಎಲ್ಲಾ ರೀತಿಯ ಅಭಿವೃದ್ಧಿಗೂ ಈ ಬಜೆಟ್ ಪೂರಕ ಎಂದಿದ್ದಾರೆ.


Spread the love

LEAVE A REPLY

Please enter your comment!
Please enter your name here