Home Politics News ಮೋದಿ ಚಿನ್ನ ಖರೀದಿ ಹೇಳಿಕೆಗೆ ಕಾಂಗ್ರೆಸ್ ವಿರೋಧ: ಆರ್ ಅಶೋಕ್ ತಿರುಗೇಟು!

ಮೋದಿ ಚಿನ್ನ ಖರೀದಿ ಹೇಳಿಕೆಗೆ ಕಾಂಗ್ರೆಸ್ ವಿರೋಧ: ಆರ್ ಅಶೋಕ್ ತಿರುಗೇಟು!

0
ಮೋದಿ ಚಿನ್ನ ಖರೀದಿ ಹೇಳಿಕೆಗೆ ಕಾಂಗ್ರೆಸ್ ವಿರೋಧ: ಆರ್ ಅಶೋಕ್ ತಿರುಗೇಟು!
Spread the love

ಬೆಂಗಳೂರು: ಚಿನ್ನ ಮತ್ತು ಇಂಧನ ಬಳಕೆಯನ್ನು ಕಡಿಮೆ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ನೀಡಿರುವ ಕರೆಗೆ ಕಾಂಗ್ರೆಸ್ ನಾಯಕರು ಆಕ್ಷೇಪ ವ್ಯಕ್ತಪಡಿಸಿರುವ ಬೆನ್ನಲ್ಲೇ ಬಿಜೆಪಿ ನಾಯಕರು ತಿರುಗೇಟು ನೀಡಲು ಆರಂಭಿಸಿದ್ದಾರೆ.

ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್ ಅಶೋಕ್, ಕಾಂಗ್ರೆಸ್ ಪಕ್ಷದ ನೆನಪಿನ ಶಕ್ತಿ ನಿಗೂಢವಾಗಿ ಕೆಲಸ ಮಾಡುತ್ತದೆ ಎಂದು ಟೀಕಿಸಿದ್ದಾರೆ. ಇದೇ ರೀತಿಯ ಆರ್ಥಿಕ ಶಿಸ್ತಿನ ಮನವಿಯನ್ನು ಈ ಹಿಂದೆ ಕಾಂಗ್ರೆಸ್ ಸರ್ಕಾರಗಳೂ ಮಾಡಿದ್ದವು ಎಂದು ಹೇಳಿ ಪ್ರಧಾನಿ ಮೋದಿಯವರ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.

1967ರಲ್ಲಿ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಭಾರತೀಯರು ಚಿನ್ನ ಖರೀದಿಸುವುದನ್ನು ತಪ್ಪಿಸುವಂತೆ ಮನವಿ ಮಾಡಿದ್ದನ್ನು “ರಾಷ್ಟ್ರೀಯ ಶಿಸ್ತು” ಎಂದು ಕರೆಯಲಾಗಿತ್ತು. 2013ರಲ್ಲಿ ಕೇಂದ್ರದ ಹಣಕಾಸು ಸಚಿವರಾಗಿದ್ದ ಪಿ. ಚಿದಂಬರಂ ಚಿನ್ನ ಖರೀದಿಸಬೇಡಿ ಎಂದು ಹೇಳಿದಾಗ ಅದನ್ನು “ಆರ್ಥಿಕ ಜವಾಬ್ದಾರಿ” ಎಂದು ವಿವರಿಸಲಾಗಿತ್ತು ಎಂದು ಆರ್ ಅಶೋಕ್ ತಿಳಿಸಿದ್ದಾರೆ.

ಈಗ ಪ್ರಧಾನಿ ನರೇಂದ್ರ ಮೋದಿ ದೇಶದ ವಿದೇಶಿ ವಿನಿಮಯ ಉಳಿಸಲು ಹಾಗೂ ರೂಪಾಯಿ ಮೌಲ್ಯ ಬಲಪಡಿಸಲು ಇದೇ ರೀತಿಯ ಕರೆ ನೀಡಿದಾಗ ಕಾಂಗ್ರೆಸ್ ನಾಯಕರು ಅದನ್ನು ವಿಚಿತ್ರ ಬೆಳವಣಿಗೆಯಂತೆ ಚಿತ್ರಿಸುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ಪ್ರಧಾನಿ ಮೋದಿಯವರ ನೇತೃತ್ವದಲ್ಲಿ ಭಾರತದ ಆರ್ಥಿಕತೆಯನ್ನು ವಿಶ್ವಾಸ, ವಿಶ್ವಾಸಾರ್ಹತೆ ಮತ್ತು ರಾಷ್ಟ್ರೀಯ ಹಿತಾಸಕ್ತಿಯೊಂದಿಗೆ ನಿರ್ವಹಿಸಲಾಗುತ್ತಿದೆ ಎಂಬುದನ್ನು ಕಾಂಗ್ರೆಸ್ ಜೀರ್ಣಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಆರ್ ಅಶೋಕ್ ವಾಗ್ದಾಳಿ ನಡೆಸಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಪ್ರತಿದಿನ ಆಕ್ರೋಶ ಹೊರಹಾಕುವ ಮೊದಲು ಕಾಂಗ್ರೆಸ್ ನಾಯಕರು ತಮ್ಮದೇ ಪಕ್ಷದ ಹಳೆಯ ಹೇಳಿಕೆಗಳ ಇತಿಹಾಸವನ್ನು ಒಮ್ಮೆ ಪರಿಶೀಲಿಸಿಕೊಳ್ಳಬೇಕು ಎಂದು ಅವರು ಖಾರವಾಗಿ ಟೀಕಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here