ಉಪಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಗೆಲುವು: BJPಗೆ ರಾಜ್ಯದ ಜನ ಮಂಗಳಾರತಿ ಮಾಡಿದ್ದಾರೆ – ಹೆಚ್ ಕೆ ಪಾಟೀಲ್

0
Spread the love

ಗದಗ: ಬಿಜೆಪಿಗೆ ರಾಜ್ಯದ ಜನ ಮಂಗಳಾರತಿ ಮಾಡಿದ್ದಾರೆ ಎಂದು ಸಚಿವ ಹೆಚ್ ಕೆ ಪಾಟೀಲ್ ಹೇಳಿದ್ದಾರೆ. ಗದಗದಲ್ಲಿ ಮಾತನಾಡಿದ ಅವರು, ಬಿಜೆಪಿಗೆ ರಾಜ್ಯದ ಜನ ಮಂಗಳಾರತಿ ಮಾಡಿದ್ದಾರೆ. ರಾಜ್ಯದ ಉಪಚುನಾವಣೆ ಬಹಳ ಮಹತ್ವದ್ದಾಗಿತ್ತು. ರಾಜ್ಯದ ಹಲವಾರು ಬೆಳೆವಣಿಗೆಗಳಿಗೆ ಸಮರ್ಪಕ ಉತ್ತರ ನೀಡಿ ಮಂಗಳಾರತಿ ಮಾಡಿದ್ದಾರೆ ಎಂದಿದ್ದಾರೆ.

Advertisement

ವಕ್ಫ್ ಹೆಸರಲ್ಲಿ ಸಮಾಜ ಒಡೆಯುವ ಕೆಲಸ ಮಾಡಿದ್ದರು. ಸಮಾಜ ಒಡೆಯುವ ದೊಡ್ಡ ಹುನ್ನಾರ ಮಾಡಿದ್ದರು. ಗ್ಯಾರಂಟಿ ನಿಲ್ಲಿಸುತ್ತೇವೆ ಅಂತ ಪ್ರಧಾನಿವರಿಗೂ ಸುಳ್ಳು ಹೇಳಿ ಗೊಂದಲ ಸೃಷ್ಟಿಸಿದ್ದರು. ಮುಖ್ಯಮಂತ್ರಿ ತೇಜೋವಧೆ ಮಾಡಿ ಸರ್ಕಾರ ಉಳಿಯೋದಿಲ್ಲ ಅಂತ ಹೇಳಿದ್ರು. ಆದರೆ ಜಾಗೃತ ಮತದಾರ ಬಿಜೆಪಿಗೆ ಕಪಾಳಮೋಕ್ಷ ಮಾಡಿದ್ದಾನೆ ಎಂದು ವ್ಯಂಗವಾಡಿದ್ದಾರೆ.

ಚುನಾವಣೆ ಸೋಲಿನಿಂದ ಬಿಜೆಪಿ ಸುಳ್ಳು ನಡೆಯಲ್ಲ ಅಂತ ಅರಿತುಕೊಳ್ಳಬೇಕು. ಸಮಾಜ ಒಡೆಯುವ ಕೆಟ್ಟ ಮನಸ್ಥಿತಿಗಳಿಗೆ ತಕ್ಕ ಶಾಸ್ತಿ ಆಗಿದೆ. ವೈ ನಾಡಿನಲ್ಲಿ ದೊಡ್ಡ ಮಟ್ಟದಲ್ಲಿ ಪ್ರಿಯಾಂಕಾ ಗಾಂಧಿ ಆಯ್ಕೆ ಆಗಿದ್ದಾರೆ. ಈ ಚುನಾವಣೆ ಪರಿಣಾಮಗಳು ಬಿಜೆಪಿಯನ್ನ ಅಷ್ಟೇ ಸೋಲಿಸಿಲ್ಲ, ಸುಳ್ಳು ಹೇಳುವ ಪ್ರವೃತ್ತಿಯ ಪ್ರಧಾನಿ ನರೇಂದ್ರ ಮೋದಿ ಹಾಗೂ ಶಾ ಅವರನ್ನ ಸೋಲಿಸಿದೆ ಎಂದು ಹೇಳಿದರು.

ಇನ್ನೂ ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಹೀನಾಯ ಸೋಲು ವಿಚಾರಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದಲ್ಲಿ ಆಗಿರೋ ಪರಿಣಾಮ ಎಲ್ಲರಿಗೂ ಆಶ್ಚರ್ಯ ತಂದಿದೆ ಎಂದು ಸಚಿವ ಹೆಚ್ ಕೆ ಪಾಟೀಲ್ ಹೇಳಿದ್ದಾರೆ. ಚುನಾವಣೆ ಪ್ರಕ್ರಿಯೆಯಲ್ಲಿ ಜೊತೆಗೆ ಎಣಿಕೆ ಕಾರ್ಯದಲ್ಲಿ ಅನುಮಾನ ಬಂದಿದೆ. ಈ ಬಗ್ಗೆ ರಾಜಕೀಯ ನಾಯಕರು ಅಭಿಪ್ರಾಯ ಪಟ್ಟಿದ್ದಾರೆ. ನನಗೆ ಸಂಪೂರ್ಣ ಮಾಹಿತಿ ಇಲ್ಲ ಈ ಬಗ್ಗೆ ಆದ್ದರಿಂದ ಈ ಬಗ್ಗೆ ಕಾಯ್ದು ನೋಡಿ ಅವಲೋಕನ ಮಾಡ್ತೇವೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರ್‌ಸಾಬ ಬಬರ್ಚಿ, ಮುಖಂಡರಾದ ಬಿ‌ ಬಿ ಅಸೂಟಿ, ಪ್ರಭು ಬುರಬುರೆ ಹಾಗೂ ಅಶೋಕ ಮಂದಾಲಿ ಸೇರಿದಂತೆ ಇತರರು ಇದ್ದರು.


Spread the love

LEAVE A REPLY

Please enter your comment!
Please enter your name here