ಯುದ್ಧದ ಸಂದರ್ಭದಲ್ಲಿ ಕಾಂಗ್ರೆಸ್‌ʼನವರ ಶಾಂತಿ ಸ್ಥಾಪನೆ ನಿಲುವು ಸರಿಯಲ್ಲ: ಬಿ.ವೈ ವಿಜಯೇಂದ್ರ

0
Spread the love

ಕೋಲಾರ: ಯುದ್ಧದ ಸಂದರ್ಭದಲ್ಲಿ ಕಾಂಗ್ರೆಸ್‌ʼನವರ ಶಾಂತಿ ಸ್ಥಾಪನೆ ನಿಲುವು ಸರಿಯಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿದ್ದಾರೆ. ಆಪರೇಷನ್ ಸಿಂಧೂರ್ ನಡೆಸಿ ಪಾಕಿಸ್ತಾನದ ಉಗ್ರರ ನೆಲೆಗಳ ಮೇಲೆ ದಾಳಿ ಮಾಡಿದೆ. ಆ ಮೂಲಕ ಪಾಕಿಸ್ತಾನಕ್ಕೆ ಮರ್ಮಾಘಾತ ನೀಡಲಾಗಿದೆ. ಈ ದಾಳಿ ಸಂದರ್ಭದಲ್ಲೇ ಕಾಂಗ್ರೆಸ್‌ ಟ್ವೀಟ್ ಮಾಡುವ ಮೂಲಕ ಶಾಂತಿ ಮಂತ್ರ ಜಪಿಸಿತ್ತು. ಇದಕ್ಕೆ ಜನರಿಂದ ತೀವ್ರ ವಿರೋಧ ಬೆನ್ನಲ್ಲೇ ಇದೀಗ ಟ್ವೀಟ್ ಡಿಲೀಟ್ ಮಾಡಿತ್ತು.

Advertisement

ಈ ವಿಚಾರವಾಗಿ ಕೋಲಾರದಲ್ಲಿ ಮಾತನಾಡಿದ ಅವರು, ಯುದ್ಧದ ಸಂದರ್ಭದಲ್ಲಿ ಕಾಂಗ್ರೆಸ್‌ನವರ ಶಾಂತಿ ಸ್ಥಾಪನೆ ನಿಲುವು ಸರಿಯಲ್ಲ. ಇದನ್ನು ಬದಿಗಿಟ್ಟು ಸೈನಿಕರ ಪರವಾಗಿ ನಿಲ್ಲಬೇಕು. ನಮ್ಮ ಯೋಧರು ಪಾಕಿಸ್ತಾನದ ವಿರುದ್ಧ ಹೋರಾಟ ಆರಂಭಿಸಿದ್ದು, ಈ ಯುದ್ಧದಲ್ಲಿ ಭಾರತಕ್ಕೆ ವಿಜಯ ಸಿಗಬೇಕು.

ಉಗ್ರರು ಇಡೀ ಜಗತ್ತಿಗೆ ಮಾರಕವಾಗಿ ರಕ್ತದೋಕುಳಿ ನಡೆಸುತ್ತಿದ್ದಾರೆ. ಇದಕ್ಕೆ ಪ್ರತೀಕಾರ ತೆಗೆದುಕೊಳ್ಳುವ ದಿಟ್ಟ ನಿರ್ಧಾರವನ್ನು ಮೋದಿಯವರು ತೆಗೆದುಕೊಂಡಿದ್ದಾರೆ ಎಂದು ಹೇಳಿದರು.

ನಮಗೆ ಸಂಪೂರ್ಣ ವಿಶ್ವಾಸ ಇದೆ. ಉಗ್ರಗಾಮಿಗಳ ವಿರುದ್ಧ ಹೋರಾಟದಲ್ಲಿ ಯಶಸ್ಸು ಸಿಗುತ್ತದೆ. ಇಂತಹ ಯುದ್ಧದ ಸಂದರ್ಭದಲ್ಲಿ ಎಲ್ಲರೂ ಒಗ್ಗಟ್ಟಾಗಿ ಬೆಂಬಲಿಸುತ್ತಿದ್ದಾರೆ. ಆದರೆ ಕಾಂಗ್ರೆಸ್‌ನವರು ದೇಶ ವಿರೋಧಿ ಚಟುವಟಿಕೆಗಳಿಗೆ ಬೆಂಬಲಿಸಬಾರದು. ದೇಶದ ಪರ ಗಟ್ಟಿಯಾಗಿ ನಿಲ್ಲಬೇಕು ಎಂದರು.


Spread the love

LEAVE A REPLY

Please enter your comment!
Please enter your name here