ಮುನಿರತ್ನ ಮೇಲಿನ ಷಡ್ಯಂತ್ರ ಬಹಳ ಕಾಲದಿಂದ ನಡೆಯುತ್ತಿದೆ: ಬಿವೈ ವಿಜಯೇಂದ್ರ!

0
Spread the love

ಬೆಂಗಳೂರು:– ಶಾಸಕ ಮುನಿರತ್ನ ಮೇಲೆ ಮೊಟ್ಟೆ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಪ್ರತಿಕ್ರಿಯೆ ಕೊಟ್ಟಿದ್ದಾರೆ.

Advertisement

ಈ ಸಂಬಂಧ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಬಂದಾಗಿನಿಂದ ವಿರೋಧ ಪಕ್ಷದ ಶಾಸಕರ ಮೇಲೆ ದಬ್ಬಾಳಿಕೆ ಆಗುತ್ತಿದೆ. ಇದ್ಯಾವುದು ಸರ್ಕಾರದ ಕುಮ್ಮಕ್ಕು ಇಲ್ಲದೆ ಆಗಲ್ಲ ಎಂದರು.

ಮುನಿರತ್ನ ಮೇಲಿನ ದಾಳಿ ಸಣ್ಣ ಪ್ರಕರಣದ್ದಲ್ಲ. ಅವರ ಮೇಲೆ ಷಡ್ಯಂತ್ರ ಬಹಳ ಕಾಲದಿಂದ ನಡೆಯುತ್ತಿದೆ. ಇದರಿಂದ ಕಾರ್ಯಕರ್ತರ ಮನಸ್ಸಿಗೆ ಬಹಳ ಬೇಜಾರಾಗಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ.

ಸಿಟಿ ರವಿ ಪ್ರಕರಣದಲ್ಲಿ ಪೊಲೀಸರು ಹೇಗೆ ನಡೆಸಿಕೊಂಡಿದ್ದಾರೆ ಗೊತ್ತಿದೆ. ಈ ಸರ್ಕಾರ ಪೊಲೀಸರನ್ನ ಬಳಸಿಕೊಂಡು ದಬ್ಬಾಳಿಕೆ ಮಾಡುತ್ತಿದೆ. ಬೆದರಿಕೆ, ಒತ್ತಡ ಹಾಕಿ ಏನೂ ಮಾಡಲು ಆಗಲ್ಲ. ಜನಪ್ರತಿನಿಧಿಗಳನ್ನ ಬೆದರಿಸುವುದು ಅಕ್ಷ್ಯಮ್ಯ ಅಪರಾಧ ಎಂದಿದ್ದಾರೆ.


Spread the love

LEAVE A REPLY

Please enter your comment!
Please enter your name here