ಬೆಂಗಳೂರು :- ರಾಜಧಾನಿ ಬೆಂಗಳೂರಿನಲ್ಲಿ ಕಳ್ಳರ ಕೈ ಚಳಕ ಮುಂದುವರಿದಿದೆ. ಪೊಲೀಸರು ಎಷ್ಟೇ ಕ್ರಮ ಕೈಗೊಂಡರೂ ಕಳ್ಳರು ಮಾತ್ರ ತಮ್ಮ ಚಾಳಿ ಬಿಟ್ಟಿಲ್ಲ.
Advertisement
ಅದರಂತೆ ಇದೀಗ ಖದೀಮರು ಬಿಲ್ಡಿಂಗ್ ನ ಪಾರ್ಕಿಂಗ್ ನಲ್ಲಿ ನಿಲ್ಲಿಸಿದ ದ್ವಿಚಕ್ರ ವಾಹನ ಕದ್ದು ಎಸ್ಕೇಪ್ ಆಗಿದ್ದಾರೆ. ಮಾರತಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಮುನೇನಕೊಳಲು ಬಳಿ ಈ ಘಟನೆ ಜರುಗಿದೆ.
ಡಿಸೆಂಬರ್ 7ರಂದು ನಡೆದಿದ್ದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಘಟನೆ ಸಂಬಂಧ ಮಾರತಹಳ್ಳಿ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.