ರಾಯಚೂರು : ನಗರಸಭೆ ಗುತ್ತಿಗೆ ನೌಕರರ ವೇತನ ಪಾವತಿಯಾಗದಿರುವುದರಿಂದ ಗುತ್ತಿಗೆ ನೌಕರರೊಬ್ಬರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಗರದ ಮಂಗಳವಾರ ಪೇಟೆಯಲ್ಲಿ ನಡೆದಿದೆ. ಆತ್ಮಹತ್ಯೆಗೆ ಯತ್ನಿಸಿರುವ ಗುತ್ತಿಗೆ ನೌಕರ ಅನ್ಸರ್ ಅಲಿ ಎಂದು ತಿಳಿದು ಬಂದಿದೆ.
ಅನ್ಸರ್ ಅಲಿ ನಗರಸಭೆಯ ವಿದ್ಯುತ್ ನಿರ್ವಹಣೆ ವಿಭಾಗದಲ್ಲಿ ಗುತ್ತಿಗೆ ನೌಕರಾಗಿ ಕೆಲಸ ಮಾಡುತ್ತಿದ್ದು, ಕಳೆದ 7 ತಿಂಗಳಿಂದ ವೇತನ ಪಾವತಿಯಾಗದೇ ಇರುವುದರಿಂದ ಮಾನಸಿಕವಾಗಿ ನೊಂದಿದ್ದ ಬೆಳಗ್ಗೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.



