ಸಂವಿಧಾನದ ಆಶಯಗಳನ್ನು ಮುಂದುವರೆಸಲು ಸಹಕರಿಸಿ

0
anandaswami
Spread the love

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಇಲ್ಲಿನ ಬಾಲೇಹೊಸೂರ ಗ್ರಾಮದಲ್ಲಿ ಸೋಮವಾರ ಸಂಜೆ ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಮತಯಾಚಿಸಿದರು.

Advertisement

ಈ ಸಂದರ್ಭದಲ್ಲಿ ಮಾತನಾಡಿದ ಅವರು, ನಮ್ಮ ಭಾಗದ ನೈಜ ಸಮಸ್ಯೆಗಳ ಅರಿವಿದೆ. ಮೂಲ ಸೌಕರ್ಯ ಒದಗಿಸುವುದಷ್ಟೇ ಅಲ್ಲದೆ, ನಿಮ್ಮ ಭಾವನೆಗಳಿಗೆ ಸ್ಪಂದಿಸುತ್ತೇನೆ. ಸರ್ವರಲ್ಲೂ ಸಮಭಾವ ಕಾಣುವ ಕಾಂಗ್ರೆಸ್ ಪಕ್ಷ ದೇಶದ ಅಭಿವೃದ್ಧಿಗೆ ಅನನ್ಯ ಕೊಡುಗೆ ನೀಡಿದೆ. ಪ್ರಜ್ಞಾವಂತ ಮತದಾರರು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿ, ಸಂವಿಧಾನದ ಆಶಯಗಳನ್ನು ಮುಂದುವರೆಸಲು ಸಹಕರಿಸಬೇಕು ಎಂದು ವಿನಂತಿಸಿದರು.

ಮಾಜಿ ಶಾಸಕರಾದ ರಾಮಣ್ಣ ಲಮಾಣಿ, ರಾಮಕೃಷ್ಣ ದೊಡ್ಡಮನಿ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರ ಜನಸಾಮಾನ್ಯರಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ಪಂಚ ಗ್ಯಾರಂಟಿ ಯೋಜನೆ ಜಾರಿಗೊಳಿಸಿದೆ. ಜನಪರ ಭಾವನೆಯುಳ್ಳ ಆನಂದಸ್ವಾಮಿ ಅವರಿಗೆ ಬಾಲೇಹೊಸೂರ ಗ್ರಾಮದ ಮತದಾರರು ಅತಿ ಹೆಚ್ಚಿನ ಮತಗಳಿಂದ ಬೆಂಬಲಿಸಬೇಕು ಎಂದರು.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಟಿ. ಈಶ್ವರ, ಗುರುನಾಥ ದಾನಪ್ಪನವರ, ಧ್ರುವ ಹೊನ್ನಪ್ಪನವರ, ಭಾಗ್ಯಶ್ರೀ ಬಾಬಣ್ಣ, ಯಲ್ಲಪ್ಪ ಸೂರಣಗಿ, ಜಿ.ಆರ್. ಕೊಪ್ಪದ, ಶಿವಪ್ಪ ಕಬ್ಬೇರ, ಫಕ್ಕೀರೇಶ ಮ್ಯಾಟಣ್ಣವರ, ನೀಲಪ್ಪ ಸುರಸುರಿ, ಬಸವರಡ್ಡಿ ಹನುಮರಡ್ಡಿ, ಮಾರುತಿ ಕೊಳದ, ಬಸವರಾಜ ನೀಲಣ್ಣವರ, ಭರತರಾಜ ಗುಡಗೇರಿ ಉಪಸ್ಥಿತರಿದ್ದರು.


Spread the love

LEAVE A REPLY

Please enter your comment!
Please enter your name here