ತಪ್ಪಿದ ಚಾಲಕನ ನಿಯಂತ್ರಣ: ಮಿನಿ ಬಸ್ ಪಲ್ಟಿ, ಮಗು ಸೇರಿ ಮೂವರು ಗಂಭೀರ!

0
Spread the love

ದೊಡ್ಡಬಳ್ಳಾಪುರ:- ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಮೇಷ್ಟ್ರು ಮನೆ ಕ್ರಾಸ್‌ನ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದೆ.

Advertisement

ಚಾಲಕನ ನಿಯಂತ್ರಣ ತಪ್ಪಿದ ಮಿನಿ ಬಸ್ ಪಲ್ಟಿಯಾಗಿದ್ದು, ಮಗು ಸೇರಿ ಮೂವರು ತೀವ್ರ ಗಾಯಗೊಂಡಿದ್ದಾರೆ. ಶಿರಾದ ಗಿಡ್ಡನಹಳ್ಳಿಯಿಂದ ಯಲಹಂಕದಲ್ಲಿ ನಡೆಯುತ್ತಿದ್ದ ನಾಮಕರಣ ಕಾರ್ಯಕ್ರಮಕ್ಕೆ ತೆರಳುವ ವೇಳೆ ಈ ದುರ್ಘಟನೆ ಸಂಭವಿಸಿದೆ. ಅಪಘಾತದ ನಿಖರ ಕಾರಣ ತಿಳಿದು ಬಂದಿಲ್ಲ.

ಮಗು ಸೇರಿ ಮೂವರಿಗೆ ತೀವ್ರ ಸ್ವರೂಪದ ಗಾಯಗಳಾಗಿವೆ. ಬಸ್ಸಿನಲ್ಲಿ 25 ಮಂದಿ ಪ್ರಯಾಣಿಸುತ್ತಿದ್ದರು. ಗಾಯಾಳುಗಳನ್ನು ದೊಡ್ಡಬಳ್ಳಾಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.


Spread the love

LEAVE A REPLY

Please enter your comment!
Please enter your name here