ಬೆಳಗಾವಿ: ಬೀದರ್, ಶಿವಮೊಗ್ಗದಲ್ಲಿ ಸಿಇಟಿ ಬರೆಯಲು ಬಂದಿದ್ದ ಅಭ್ಯರ್ಥಿ ಜನಿವಾರ ತೆಗೆಸಿರುವ ವಿವಾದ ಸದ್ಯ ಕರ್ನಾಟಕದಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಇದು ವ್ಯಾಪಕ ಟೀಕೆಗೆ ಗುರಿಯಾಗುವುದರೊಂದಿಗೆ ರಾಜಕೀಯ ನಾಯಕರ ಹಗ್ಗಜಗ್ಗಾಟಕ್ಕೂ ವೇದಿಕೆಯಾಗಿದೆ.
ಇನ್ನೂ ಈ ವಿಚಾರಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೇ ನೀಡಿದ್ದಾರೆ. ಬಿಜೆಪಿ ಸರ್ಕಾರದಲ್ಲಿ ಹಿಜಾಬ್ ವಿವಾದ ನಡೆದಿತ್ತು, ಈಗ ಜನಿವಾರ ವಿವಾದ ನಡೆದಿರುವ ಕುರಿತು ನಗರದಲ್ಲಿ ಮಾತನಾಡಿದ ಅವರು, ಅದು ಬೇರೆ, ಈ ವಿಷಯ ಬೇರೆ. ಅದು ಆಕಸ್ಮಿಕವಾಗಿ ನಡೆದಿತ್ತು. ಎರಡನ್ನೂ ಹೋಲಿಕೆ ಮಾಡಲು ಆಗಲ್ಲ.
ಬಿಜೆಪಿಯವರು ಪ್ರತಿಭಟನೆ ಮಾಡುತ್ತಾರೆ. ಈಗ ಅವರಿಗೆ ಬೇರೇನು ಕೆಲಸ?. ಅದೇ ರೀತಿ ಇಂದು ಬೆಳಗಾವಿಯಲ್ಲಿ ಬಿಜೆಪಿ ಶಾಸಕರೇ ಪ್ರತಿಭಟನೆಗೆ ಎಲ್ಲರನ್ನೂ ಕರೆದುಕೊಂಡು ಬಂದಿದ್ದರು. ಯಾರು ತಪ್ಪಿತಸ್ಥರಿದ್ದಾರೋ ಅವರ ಮೇಲೆ ಕ್ರಮ ಆಗಬೇಕು. ಆದರೆ, ಸರ್ಕಾರಕ್ಕೂ ಅದಕ್ಕೂ ಏನು ಸಂಬಂಧ?” ಎಂದರು.