ಅಡುಗೆ ಸಿಲಿಂಡರ್‌ ಸ್ಫೋಟ: 8 ಮಂದಿಗೆ ಗಾಯ, ಇಬ್ಬರ ಸ್ಥಿತಿ ಗಂಭೀರ!

0
Spread the love

ಬಳ್ಳಾರಿ:- ಜಿಲ್ಲೆಯ ಹೋಸಪೇಟೆ ತಾಲೂಕಿನ ಗಾದಿಗನೂರು ಗ್ರಾಮದಲ್ಲಿ ಅಡುಗೆ ಸಿಲಿಂಡರ್‌ ಸ್ಫೋಟಗೊಂಡ ಪರಿಣಾಮ ಒಂದೇ ಕುಟುಂಬದ 8 ಮಂದಿ ಗಾಯಗೊಂಡಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿರುವ ಘಟನೆ ಜರುಗಿದೆ.

Advertisement

ಸ್ಫೋಟದ ತೀವ್ರತೆಗೆ ಮನೆಯ ಗೋಡೆಯೇ ಕುಸಿದಿದ್ದು, ವಕೀಲ ಹಾಲಪ್ಪ, ಸಹೋದರ ಮೈಲಾರಪ್ಪ ಸೇರಿದಂತೆ ಒಂದೇ ಕುಟುಂಬದ 8 ಮಂದಿ ಗಾಯಗೊಂಡಿದ್ದಾರೆ. ಮನೆಯಲ್ಲಿ ಎಲ್ಲರೂ ಮಲಗಿರುವಾಗ ಬೆಳಗ್ಗಿನ ಜಾವ ಘಟನೆ ನಡೆದಿದೆ.

ಸದ್ಯ ಗಾಯಾಳುಗಳನ್ನ‌ ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ತೋರಣಗಲ್ಲು ಸಂಜೀವಿನಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ವಿಷಯ ತಿಳಿಯುತ್ತಿದ್ದಂತೆ ಅಗ್ನಿಶಾಮಕದಳದ ಸಿಬ್ಬಂದಿ, ಹೊಸಪೇಟೆ ಗ್ರಾಮೀಣ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ


Spread the love

LEAVE A REPLY

Please enter your comment!
Please enter your name here