HomeBengaluru Newsಆಧಾಯಕ್ಕಾಗಿ ಜಾಹೀರಾತಿಗೆ ಮಣೆಹಾಕಿದ ಪಾಲಿಕೆ : ಹೈಕೋರ್ಟ್ ಆದೇಶಕ್ಕೆ ಇಲ್ಲದ ಬೆಲೆ

ಆಧಾಯಕ್ಕಾಗಿ ಜಾಹೀರಾತಿಗೆ ಮಣೆಹಾಕಿದ ಪಾಲಿಕೆ : ಹೈಕೋರ್ಟ್ ಆದೇಶಕ್ಕೆ ಇಲ್ಲದ ಬೆಲೆ

For Dai;y Updates Join Our whatsapp Group

Spread the love

ಬೆಂಗಳೂರು;- ನಗರದಲ್ಲಿ ಚಿಕ್ಕ ಪುಟ್ಟ ಕಾರ್ಯಕ್ರಮಗಳಿಂದ ಆರಂಭಿಸಿ, ಅಂಗಡಿಮುಂಗಟ್ಟುಗಳವರೆಗೆ ಎಲ್ಲದಕ್ಕೂ ಜಾಹೀರಾತು ಫಲಕ ಹಾಕೋದು ಕಾಮನ್. ಇದರಲ್ಲಿ ನೂರು ಅಧಿಕೃತವಾದರೇ, ಸಾವಿರ ಅನಧಿಕೃತ. ಆದರೆ ನಗರದಲ್ಲಿ ಅನಧಿಕೃತ ಜಾಹೀರಾತಿಗೆ ಕಡಿವಾಣ ಹಾಕಲು ಹಾಗೂ ಬಿಬಿಎಂಪಿ ಖಜಾನೆ ಭರ್ತಿ ಮಾಡಲು ಬಿಬಿಎಂಪಿ ಮಾಸ್ಟರ್ ಪ್ಲ್ಯಾನ್ ಮಾಡಿದೆ.

ಇದಕ್ಕಾಗಿ ಜಾಹೀರಾತು ಬೈಲಾಗೆ ತಿದ್ದುಪಡಿ ಮಾಡಲು ಬಿಬಿಎಂಪಿ ಸಿದ್ಧವಾಗಿದೆ. ನಗರದ ಸೌಂದರ್ಯ ಮತ್ತು ಪರಿಸರ ಹಾಳು ಮಾಡುತ್ತಿರುವ ಜಾಹೀರಾತು ಪ್ರದರ್ಶನವನ್ನು ಈ ಹಿಂದೆ ನಿಷೇಧಿಸಲಾಗಿತ್ತು. ಬಿಬಿಎಂಪಿ ಕೌನ್ಸಿಲ್ ಸಭೆಯಲ್ಲಿ ತೆಗೆದುಕೊಂಡ ನಿರ್ಣಯದಂತೆ ಕೆಲ ಸಂದರ್ಭಗಳನ್ನು ಹೊರತುಪಡಿಸಿ ಜಾಹೀರಾತು ಪ್ರದರ್ಶನ ಸಂಪೂರ್ಣ ನಿಷೇಧಿಸಲಾಗಿದೆ.

ಅದರೂ ಕೂಡ ರಾಜಕೀಯ ಪಕ್ಷಗಳು ಸೇರಿ ಖಾಸಗಿಯವರು ಎಲ್ಲೆಂದರಲ್ಲಿ ಫ್ಲೆಕ್ಸ್ , ಬ್ಯಾನರ್‌ ಗಳನ್ನು ಅಳವಡಿಸಿ ಬಿಬಿಎಂಪಿ ನಿಯಮ ಹಾಗೂ ಹೈಕೋರ್ಟ್ ಆದೇಶ ಉಲ್ಲಂಘನೆ ನಡೆಯುತ್ತಲೇ ಇತ್ತು. ಈಗ ಅದಕ್ಕೊಂದು ಉಪಾಯ ಕಂಡುಕೊಂಡಿದೆ ಪಾಲಿಕೆ. ಈ ರೂಲ್ಸ್ ಪ್ರಕಾರ ಬಿಬಿಎಂಪಿಯ ಬೊಕ್ಕಸ ತುಂಬಿಸಿಕೊಳ್ಳೋದು ಪ್ಲ್ಯಾನ್.

ಇದಕ್ಕಾಗಿ ಬಿಬಿಎಂಪಿ ಬೈಲಾಗೇ ತಿದ್ದುಪಡಿ ತಂದು ಬಿಬಿಎಂಪಿ ಹೊಸ ಜಾಹೀರಾತು ಪಾಲಿಸಿ ರೂಪಿಸಲು ಮುಂದಾಗಿದೆ. ಇದಕ್ಕಾಗಿ ಬಿಬಿಎಂಪಿ ವ್ಯಾಪ್ತಿಯಲ್ಲಿ ಜಾಹೀರಾತು ಅಳವಡಿಕೆ ಬೈಲಾದಲ್ಲಿ ತಿದ್ದುಪಡಿ ತರಲಾಗುತ್ತಿದೆ. ಈ ತಿದ್ದುಪಡಿ ಬಳಿಕ ಬಿಬಿಎಂಪಿಯ ಜಾಹೀರಾತು ದರ ಕಳೆದ ಅವಧಿಗಿಂತ 50% ರಷ್ಟು ದರ ಏರಿಕೆಮಾಡೋ ಲೆಕ್ಕಾಚಾರದಲ್ಲಿದೆ ಪಾಲಿಕೆ.

ಇದಲ್ಲದೇ ಬಿಬಿಎಂಪಿ ಒಡೆತನದ ಜಾಗಗಳಲ್ಲಿ ಮಾತ್ರ ಜಾಹೀರಾತು ಪ್ರದರ್ಶನಕ್ಕೆ ಅನುಮತಿ ನೀಡಬೇಕು ಎಂಬ ನಿಯಮ ರೂಪಿಸಲು ಮುಂದಾಗಿದೆ. ಅಲ್ಲದೇ ಜಾಹೀರಾತು ಪ್ರದರ್ಶನದಿಂದ ಆದಾಯ ಹೆಚ್ಚಿಸಿಕೊಳ್ಳಲು ವಲಯಗಳ ನಿಗದಿ ಮಾಡಲಾಗುತ್ತಿದೆ. ಬಿಬಿಎಂಪಿ ವಲಯ ಅನುಸಾರವಾಗಿ ಪ್ರತ್ಯೇಕ ದರ ನಿಗದಿ ಮಾಡಬೇಕು ಎಂದು ನಿಯಮ ರೂಪಿಸಲಾಗುತ್ತಿದೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!