ಕೃಷ್ಣ ಬೈರೇಗೌಡರ ವಿರುದ್ಧ ಕೇಳಿ ಬಂತು ಭ್ರಷ್ಟಾಚಾರ ಆರೋಪ: ಕಂದಾಯ ಸಚಿವರ ತಲೆದಂಡ ಫಿಕ್ಸ್!?

0
Spread the love

ಬೆಂಗಳೂರು:- ಜನಾದೇಶದ ಮೂಲಕ ಅಧಿಕಾರಕ್ಕೆ ಬಂದ ಕಾಂಗ್ರೆಸ್ ನಲ್ಲಿ ಮೊದಲಿನಿಂದಲೂ ಭ್ರಷ್ಟಾಚಾರದ ವಾಸನೆ ಬರುತ್ತಿದೆ. ಊದಾಹರಣೆಗೆ ವಾಲ್ಮೀಕಿ ಹಗರಣ, ಮುಡಾ ಹಗರಣ, ಕಮಿಷನ್ ಆರೋಪ ಹೀಗೆ ಸಾಕಷ್ಟು ಸಾಲು-ಸಾಲು ಆರೋಪಗಳಿವೆ.

Advertisement

ಅಷ್ಟೇ ಅಲ್ಲದೇ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಸಚಿವ ಬಿ. ನಾಗೇಂದ್ರ ರಾಜೀನಾಮೆ ಕೊಟ್ಟು ಜೈಲು ಪಾಲಾಗಿದರು. ಬಳಿಕ ಜಾಮೀನು ಮೇಲೆ ಹೊರ ಬಂದರು.

ಇದೀಗ ರಾಜ್ಯದ ಮತ್ತೋರ್ವ ಸಚಿವರ ವಿರುದ್ಧ ಗಂಭೀರ ಆರೋಪ ಕೇಳಿ ಬಂದಿದೆ. ಭ್ರಷ್ಟಾಚಾರದಲ್ಲಿ ತೊಡಗಿರುವ ಅಧಿಕಾರಿಗಳ ರಕ್ಷಣೆ ಮಾಡುತ್ತಿದ್ದಾರೆ ಎಂದು ಆರೋಪಿಸಿ ಸಾಮಾಜಿಕ ಕಾರ್ಯಕರ್ತರೊಬ್ಬರು ಸಚಿವ ಕೃಷ್ಣ ಬೈರೇಗೌಡರ ಅವರ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿದ್ದಾರೆ.

ಭ್ರಷ್ಟಾಚಾರ ಆರೋಪದಡಿ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ದೂರು ನೀಡಿದ್ದು, ಕಂದಾಯ ಇಲಾಖೆಯಲ್ಲಿನ ಭ್ರಷ್ಟಾಚಾರಗಳಿಗೆ ಕಡಿವಾಣ ಹಾಕುತ್ತಿಲ್ಲ. ಭ್ರಷ್ಟಾಚಾರದಲ್ಲಿ ತೊಡಗಿರುವ ಅಧಿಕಾರಿಗಳ ರಕ್ಷಣೆ ಮಾಡುತ್ತಿದ್ದಾರೆ. ಹೀಗಾಗಿ ಸಚಿವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಹಗರಣಗಳ ತನಿಖೆ ನಡೆಸಿ ಸೂಕ್ತ ಕ್ರಮಕ್ಕೆ ಸರ್ಕಾರಕ್ಕೆ ಸೂಚನೆ ನೀಡಬೇಕು ಎಂದು ಉಲ್ಲೇಖಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here