ವಿದೇಶಕ್ಕೆ ಹೋಗಲು ದರ್ಶನ್ ಗೆ ಅನುಮತಿ ನೀಡಿದ ಕೋರ್ಟ್

0
Spread the love

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಯಾಗಿರುವ ನಟ ದರ್ಶನ್‌ ಗೆ ವಿದೇಶಕ್ಕೆ ತೆರಳಲು ಕೋರ್ಟ್‌ ಅನುಮತಿ ನೀಡಿದೆ. ಸುಮಾರು 27 ದಿನಗಳ ವರೆಗೆ ದರ್ಶನ್‌ ಶೂಟಿಂಗ್‌ ಗಾಗಿ ವಿದೇಶಕ್ಕೆ ತೆರಳಲು ಬೆಂಗಳೂರಿನ ಸಿಸಿಹೆಚ್ 57ನೇ ನ್ಯಾಯಾಲಯ ಅನುಮತಿ ಕೊಟ್ಟಿದೆ.

Advertisement

ಸದ್ಯ ದರ್ಶಬ್‌ ಡೆವಿಲ್‌ ಸಿನಿಮಾದ ಶೂಟಿಂಗ್‌ ನಲ್ಲಿ ಬ್ಯುಸಿಯಾಗಿದ್ದಾರೆ. ಕರ್ನಾಟಕದ ಹಲವು ಕಡೆಗಳಲ್ಲಿ ಶೂಟಿಂಗ್‌ ಮಾಡಿರುವ ಚಿತ್ರತಂಡ ಇದೀಗ ವಿದೇಶದಲ್ಲಿ ಶೂಟಿಂಗ್‌ ಮಾಡಲು ಮುಂದಾಗಿದೆ. ಜುಲೈ 1ರಿಂದ ಜುಲೈ 27ರವರೆಗೆ ವಿದೇಶದಲ್ಲಿ ಸಿನಿಮಾ ಶೂಟಿಂಗ್ ನಡೆಯಲಿದ್ದು ಅದಕ್ಕಾಗಿ ದರ್ಶನ್‌ ವಿದೇಶಕ್ಕೆ ತೆರಳಲು ಅನುಮತಿ ಕೋರಿ ಕೋರ್ಟ್‌ ಮೆಟ್ಟಿಲೇರಿದ್ದರು. ಇದೀಗ ವಿದೇಶಕ್ಕೆ ತೆರಳಲು ದರ್ಶನ್‌ ಗೆ ಕೋರ್ಟ್‌ ಗ್ರೀನ್‌ ಸಿಗ್ನಲ್‌ ನೀಡಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ ಜಾಮೀನು ಪಡೆದು ಹೊರ ಬಂದಿದ್ದಾರೆ. ಆದ್ರೆ ಕೋರ್ಟ್‌ ನಲ್ಲಿ ಪ್ರಕರಣದ ವಿಚಾರಣೆ ನಡೆಯುತ್ತಿದ್ದು ಮುಂದಿನ ವಿಚಾರಣೆಯ ದಿನಾಂಕದಂದು ದರ್ಶನ್ ತಪ್ಪದೇ ಕೋರ್ಟ್‌ ಹಾಜರಾಗಬೇಕು ಎಂಬ ಷರತ್ತಿನ ಮೇರೆಗೆ ವಿದೇಶಕ್ಕೆ ಹೋಗಲು ನ್ಯಾಯಾಲಯ ಅನುಮತಿ ನೀಡಿದೆ.


Spread the love

LEAVE A REPLY

Please enter your comment!
Please enter your name here