ಹಸುಗಳ ಕೆಚ್ಚಲು ಕೊಯ್ದು ದುಷ್ಕೃತ್ಯ: ಬಿಗ್ ಬಾಸ್ ಸ್ಪರ್ಧಿ ಚೈತ್ರಾ ಕುಂದಾಪುರ ಹೇಳಿದ್ದೇನು?

0
Spread the love

ಬೆಂಗಳೂರು:- ಚಾಮರಾಜಪೇಟೆಯಲ್ಲಿ ಮೂರು ಹಸುಗಳ ಕೆಚ್ಚಲು ಕೊಯ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಗ್ ಬಾಸ್ ಸೀಸನ್ 11 ರಲ್ಲಿ ಕಳೆದ ಬಾನುವಾರ ಎಲಿಮಿನೇಟ್ ಆಗಿ ಬಂದಿರುವ ಚೈತ್ರಾ ಕುಂದಾಪುರ ಅವರು ಪ್ರತಿಕ್ರಿಯೆ ಕೊಟ್ಟಿದ್ದಾರೆ.

Advertisement

ಈ ಸಂಬಂಧ ಮಾತನಾಡಿದ ಅವರು, ನಮಗೆ ಜೀವನಪೂರ್ತಿ ಹಾಲನ್ನು ಕೊಟ್ಟು ಸಾಕುವ ಗೋವಿನ ಕೆಚ್ಚಲು ಕೊಯ್ಯುವ ವಿಕೃತಿ ಮರೆಯುತ್ತಾರೆ ಅಂದರೆ ನಾಳೆ ಅವರು ಮನುಷ್ಯರ ಮೇಲೆಯೂ ಮರೆಯಬಹುದು. ತಪ್ಪು ಮಾಡಿದವರಿಗೆ ತಕ್ಕ ಶಿಕ್ಷೆಯಾಗಬೇಕು ಎಂದು ಚೈತ್ರಾ ಗರಂ ಆಗಿದ್ದಾರೆ.

ಇದನ್ನು ನಾನು ಭಾರೀ ಕಠಿಣವಾದ ಶಬ್ಧಗಳಿಂದ ಖಂಡಿಸುತ್ತೇನೆ. ಗೋವು ಅಂದರೆ ದೇವಸ್ಥಾನ ಇದ್ದ ಹಾಗೆ. ಮುಕ್ಕೋಟಿ ದೇವತೆಗಳ ಆವಾಸ ಸ್ಥಾನ ಅಂತ ನಾನು ನಂಬುತ್ತೇನೆ. ಗೋವು ಧಾರ್ಮಿಕ ಭಾವನೆ ಜೊತೆ ಒಂದು ಕುಟುಂಬದ ಆರ್ಥಿಕ ಆಧಾರ ಸ್ತಂಭ ಕೂಡ ಆಗಿತ್ತು. ಆ ಗೋವುಗಳ ಕೆಚ್ಚಲನ್ನು ಕೊಯ್ಯುತ್ತಾರೆ ಅಂದರೆ ಅದು ವಿಕೃತಿ ಎಂದು ಚೈತ್ರಾ ಮಾತನಾಡಿದ್ದಾರೆ.

ಕುಡಿದ ಮತ್ತಿನಲ್ಲಿ ಮಾಡಿದ್ದಾರೆ ಎಂದೆಲ್ಲಾ ತೆಪೆ ಹಚ್ಚುವ ಕೆಲಸ ನಡೆಯುತ್ತಿದೆ. ಖಂಡಿತವಾಗಿಯೂ ಅದರ ಉದ್ದೇಶ ಹಾಗೇ ಆಗಿರೋದಕ್ಕೆ ಸಾಧ್ಯವಿಲ್ಲ. ಇದು ಉದ್ದೇಶಪೂರ್ವಕವಾಗಿಯೇ ಈ ಘಟನೆ ಜರುಗಿದೆ ಎಂದಿದ್ದಾರೆ. ಆ ಗೋವು ಮಾಲೀಕರ ಆರ್ಥಿಕ ಸಂಕಷ್ಟ ಮತ್ತು ಅವರ ಭಾವನ್ಮಾಕ ಬಾಂಧವ್ಯಕ್ಕೆ ಸಾಥ್ ನೀಡಬೇಕು. ನಾವು ಕೂಡ ನಮ್ಮ ಮನೆಯಲ್ಲಿ ಗೋವುಗಳನ್ನು ಸಾಕಿರೋದರಿಂದ ಗೋವುಗಳ ಜೊತೆಗಿನ ಭಾವನಾತ್ಮಕ ಬಾಂಧವ್ಯದ ಬಗ್ಗೆ ನನಗೆ ಗೊತ್ತು. ಈ ಘಟನೆ ಬಗ್ಗೆ ಪ್ರಾಣಿ ದಯ ಸಂಘದವರು ಇದನ್ನು ಖಂಡಿಸಬೇಕು ಎಂದಿದ್ದಾರೆ.


Spread the love

LEAVE A REPLY

Please enter your comment!
Please enter your name here