HomeVijayanagarಪಿಣರಾಯಿ ಮನೆ ಮೇಲೆ ಇ.ಡಿ ದಾಳಿ ಖಂಡಿಸಿ ಸಿಪಿಐ(ಎಂ) ಪ್ರತಿಭಟನೆ

ಪಿಣರಾಯಿ ಮನೆ ಮೇಲೆ ಇ.ಡಿ ದಾಳಿ ಖಂಡಿಸಿ ಸಿಪಿಐ(ಎಂ) ಪ್ರತಿಭಟನೆ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಹಗರಿಬೊಮ್ಮನಹಳ್ಳಿ: ಕೇರಳದ ಮಾಜಿ ಮುಖ್ಯಮಂತ್ರಿ ಹಾಗೂ ಹಾಲಿ ವಿರೋಧ ಪಕ್ಷದ ನಾಯಕರಾದ ಪಿಣರಾಯಿ ವಿಜಯನ್ ಅವರ ನಿವಾಸದ ಮೇಲೆ ನಡೆದ ಇ.ಡಿ ದಾಳಿಯನ್ನು ಖಂಡಿಸಿ ಸಿಪಿಐ(ಎಂ) ಪಕ್ಷದ ತಾಲೂಕು ಸಮಿತಿಯಿಂದ ಶನಿವಾರ ಪಟ್ಟಣದ ಬಸವೇಶ್ವರ ವೃತ್ತದ ಬಳಿ ಭಾರಿ ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. “ಇ.ಡಿ ದಾಳಿ ಎಂಬುದು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ರಾಜಕೀಯ ಪ್ರತೀಕಾರದ ಭಾಗ. ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದ ಒಂದೇ ತಿಂಗಳೊಳಗೆ ಪಿಣರಾಯಿ ವಿಜಯನ್ ನಿವಾಸದ ಮೇಲೆ ದಾಳಿ ನಡೆಸಿರುವುದು ವಿರೋಧ ಪಕ್ಷದ ನಾಯಕರನ್ನು ಬೆದರಿಸುವ ಉದ್ದೇಶವನ್ನೇ ಸ್ಪಷ್ಟಪಡಿಸುತ್ತದೆ” ಎಂದು ಆರೋಪಿಸಿದರು.
ಎಕ್ಸಲಾಜಿಕ್ ಪ್ರಕರಣಕ್ಕೂ ಪಿಣರಾಯಿ ವಿಜಯನ್ ಅವರಿಗೂ ಯಾವುದೇ ಸಂಬಂಧವಿಲ್ಲ ಎಂದು ನ್ಯಾಯಾಲಯಗಳು ಹಲವು ಬಾರಿ ಗಮನಿಸಿದರೂ, ರಾಜಕೀಯ ಬೇಟೆ ಮಾತ್ರ ನಿರಂತರವಾಗಿ ಮುಂದುವರಿಯುತ್ತಿದೆ ಎಂದು ಪ್ರತಿಭಟನಾಕಾರರು ಕಿಡಿಕಾರಿದರು.
ಕೇರಳದ ಮುಖ್ಯಮಂತ್ರಿ ವಿ.ಡಿ. ಸತೀಶನ್ ಅವರು ದೆಹಲಿಯಲ್ಲಿ ಪ್ರಧಾನಮಂತ್ರಿಯನ್ನು ಭೇಟಿ ಮಾಡಿದ ತಕ್ಷಣವೇ ಈ ದಾಳಿ ನಡೆದಿರುವುದು ಹಲವು ಗಂಭೀರ ಅನುಮಾನಗಳಿಗೆ ಕಾರಣವಾಗಿದೆ ಎಂದು ಮುಖಂಡರು ಆರೋಪಿಸಿದರು.
ರಾಜ್ಯದಲ್ಲಿ ಯುಡಿಎಫ್ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ದಿನಗಳಲ್ಲಿ ಇಂತಹ ಕ್ರಮಗಳು ಜರುಗುತ್ತಿರುವುದು ಪ್ರಜಾಪ್ರಭುತ್ವಕ್ಕೆ ಅಪಾಯಕಾರಿ ಬೆಳವಣಿಗೆ. ಕೇರಳದಲ್ಲಿ ಜನರು ಈಗಾಗಲೇ ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದು, ದೇಶದಾದ್ಯಂತ ಇದರ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದೆ ಎಂದು ಹೇಳಿದರು.
ಕೇಂದ್ರ ಸರ್ಕಾರದ ಜನವಿರೋಧಿ, ನವ ಉದಾರವಾದಿ ಹಾಗೂ ದಮನಕಾರಿ ನೀತಿಗಳ ವಿರುದ್ಧ ಜನಸಾಮಾನ್ಯರ ಧ್ವನಿಯನ್ನು ಸಿಪಿಐ(ಎಂ) ಪಕ್ಷ ಸದಾ ರಕ್ಷಿಸಲಿದೆ. ಜನಪರ ಹೋರಾಟ ಮುಂದುವರಿಯಲಿದೆ ಎಂದು ಪ್ರತಿಭಟನಾಕಾರರು ಘೋಷಿಸಿದರು.
ಪ್ರತಿಭಟನೆಯ ನೇತೃತ್ವವನ್ನು ತಾಲೂಕು ಕಾರ್ಯದರ್ಶಿ ಬಿ. ಮಾಳಮ್ಮ ವಹಿಸಿದ್ದರು. ತಾಲೂಕು ಸಮಿತಿ ಮುಖಂಡರಾದ ಎಸ್. ಜಗನ್ನಾಥ, ಕೆ. ರಮೇಶ್, ಜಿ. ರಮೇಶ್, ಕೆ. ರಾಮಣ್ಣ, ಸರ್ದಾರ್ ಹುಲಿಗೆಮ್ಮ, ಬಿ. ಮೈಲಮ್ಮ, ತಟ್ನಮ್ಮ, ರಂಗಪ್ಪ ದಾಸರ, ಕೂಟಗಿ ಮಲ್ಲಿಕಾರ್ಜುನ, ದುರುಗಮ್ಮ ಸೇರಿದಂತೆ ಹಲವರು ಭಾಗವಹಿಸಿದ್ದರು.
“ರಾಜಕೀಯ ವಿರೋಧಿಗಳನ್ನು ಮಣಿಸಲು ತನಿಖಾ ಸಂಸ್ಥೆಗಳನ್ನು ಬಳಸುವುದು ಪ್ರಜಾಪ್ರಭುತ್ವದ ಮೌಲ್ಯಗಳ ಮೇಲಿನ ನೇರ ದಾಳಿ”
ಬಿ. ಮಾಳಮ್ಮ

Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!