ಕಲಿಕಾ ಹಬ್ಬದಿಂದ ಸೃಜನಶೀಲತೆ ಅನಾವರಣ

0
Spread the love

ವಿಜಯಸಾಕ್ಷಿ ಸುದ್ದಿ, ಲಕ್ಮೇಶ್ವರ: ಪ್ರತಿಯೊಬ್ಬ ಮಕ್ಕಳಲ್ಲಿಯೂ ಪ್ರತಿಭೆ ಇರುತ್ತದೆ. ಅಂತಹ ಮಕ್ಕಳಿಗೆ ಶಾಲೆಗಳಲ್ಲಿ ಕಲಿಕಾ ಹಬ್ಬಗಳು ಅವರ ಸೃಜನಶೀಲತೆಯನ್ನು ಹೊರಹಾಕಲು ಸಹಾಯ ಮಾಡುತ್ತವೆ ಎಂದು ಪುರಸಭೆ ಸದಸ್ಯರಾದ ರಾಜೀವ್ ಕುಂಬಿ ಹೇಳಿದರು.

Advertisement

ಅವರು ಮಂಗಳವಾರ ಸರ್ಕಾರಿ ಮಾದರಿ ಹೆಣ್ಣುಮಕ್ಕಳ ಪ್ರಾಥಮಿಕ ಶಾಲೆಯಲ್ಲಿ ಲಕ್ಮೇಶ್ವರ ದಕ್ಷಿಣ ಕ್ಲಸ್ಟರ್ ಮಟ್ಟದ ಎಫ್‌ಎಲ್‌ಎನ್ ಕಲಿಕಾ ಹಬ್ಬ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಮಕ್ಕಳಲ್ಲಿ ಅಡಗಿರುವ ಪ್ರತಿಭೆಗೆ ಅನೇಕ ಚಟುವಟಿಕೆಗಳನ್ನು ಶಾಲಾ ಹಂತದಲ್ಲಿ ಏರ್ಪಡಿಸಿ ಅವರಿಗೆ ಅವಕಾಶ ಮಾಡಿಕೊಡುತ್ತಿರುವದು ಉತ್ತಮ ವಿಚಾರವಾಗಿದ್ದು, ಕಲಿಕೆಯಲ್ಲಿ ಹಿಂದುಳಿದ ಮಕ್ಕಳಿಗೂ ಸಹ ಪ್ರೋತ್ಸಾಹ ನೀಡಿ ಪ್ರತಿಭೆ ಪ್ರದರ್ಶಿಸಲು ಅವಕಾಶ ಮಾಡಿಕೊಡುವ ನಿಟ್ಟಿನಲ್ಲಿ ಶಿಕ್ಷಕರು ಶ್ರಮವಹಿಸಬೇಕು ಎಂದು ಹೇಳಿದರು.

ಕ.ರಾ.ಪ್ರಾ.ಶಾ ಶಿಕ್ಷಕರ ಸಂಘದ ಅಧ್ಯಕ್ಷರಾದ ಬಿ.ಎಸ್. ಹರ್ಲಾಪೂರ ಮಾತನಾಡಿ, ಇಂತಹ ಕಾರ್ಯಕ್ರಮಗಳು ಮಕ್ಕಳ ಕಲಿಕಾ ಸಾಮರ್ಥ್ಯ ಹೆಚ್ಚಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತವೆ ಎಂದರು.

ತಾಲೂಕು ದೈಹಿಕ ಶಿಕ್ಷಣಾಧಿಕಾರಿ ಎಂ.ಎಂ. ಹವಳದ, ಎಸ್‌ಡಿಎಮ್‌ಸಿ ಅಧ್ಯಕ್ಷ ಮಲ್ಲೇಶಪ್ಪ ಬಸಾಪುರ, ಉಪಾಧ್ಯಕ್ಷರಾದ ನಿಖಿತಾ ಶೇರಖಾನೆ ಚಂದ್ರು ನೇಕಾರ, ಸರಕಾರಿ ನೌಕರ ಸಂಘದ ತಾಲೂಕಾಧ್ಯಕ್ಷ ಗುರು ಹವಳದ, ಕಾರ್ಯದರ್ಶಿ ಎಂ.ಎ. ನದಾಫ್, ಮಂಜು ವಾರದ, ಡಿ.ಡಿ. ಲಮಾಣಿ, ಎನ್‌ಪಿಎಸ್ ನೌಕರರ ಸಂಘದ ಅಧ್ಯಕ್ಷ ಎಫ್.ಎಸ್. ತಳವಾರ, ಪ್ರಧಾನ ಗುರುಗಳಾದ ಬಿ.ಎಮ್. ಕುಂಬಾರ, ಎಸ್.ಎಸ್. ಜಿರಂಕಳಿ, ಐ.ಬಿ. ಜಕ್ಕನಗೌಡ್ರ, ಸಿಆರ್‌ಪಿ ಸತೀಶ್ ಬೊಮಲೆ, ಉಮೇಶ್ ನೇಕಾರ, ಎನ್.ಎ. ಮುಲ್ಲಾ ಹಾಗೂ ಲಕ್ಮೇಶ್ವರ  ದಕ್ಷಿಣ ಕ್ಲಸ್ಟರ್‌ನ ಎಲ್ಲಾ ಸರ್ಕಾರಿ ಶಾಲೆಗಳ ಮುಖ್ಯ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಹಾಜರಿದ್ದರು. ಎಚ್.ಡಿ. ನಿಂಗರೆಡ್ಡಿ ಸ್ವಾಗತಿಸಿದರು, ಎನ್.ಎಸ್. ಬಂಕಾಪುರ ನಿರ್ವಹಿಸಿದರು. ಆರ್.ಎಮ್. ಶಿರಹಟ್ಟಿ ವಂದಿಸಿದರು.


Spread the love

LEAVE A REPLY

Please enter your comment!
Please enter your name here