ಹುಬ್ಬಳ್ಳಿ:– ಚಾಕುವಿನಿಂದ ಇರಿದು ಪೂಜಾರಿಯ ಬರ್ಬರ ಹತ್ಯೆ ನಡೆದಿರುವ ಘಟನೆ ಹುಬ್ಬಳ್ಳಿ ನಗರದ ಎಪಿಎಂಸಿ ಬಳಿಯ ಈಶ್ವರನಗರದಲ್ಲಿ ನಡೆದಿದೆ.
ವೈಷ್ಣೋದೇವಿ ದೇವಸ್ಥಾನದಲ್ಲಿ ಪೂಜಾರಿಯಾಗಿದ್ದ ದೇವೇಂದ್ರಪ್ಪ ಹೊನ್ನಳಿ ಎಂಬವರು ಹತ್ಯೆಯಾಗಿದ್ದು, ಮೃತದೇಹವನ್ನು ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.
ದುಷ್ಕರ್ಮಿಗಳು ಚಾಕುವಿನಿಂದ ಇರಿದು ಹತ್ಯೆಗೈದ್ದು ಪರಾರಿಯಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.
ಘಟನಾ ಸ್ಥಳಕ್ಕೆ ಡಿಸಿಪಿ ಮಹಾಲಿಂಗಪ್ಪ ನಂದಗಾವಿ, ನವನಗರ ಎಪಿಎಂಸಿ ಠಾಣೆಯ ಇನ್ಸ್ಪೆಕ್ಟರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಪೂಜಾರಿ ದೇವೇಂದ್ರಪ್ಪಜ್ಜ ಅವರು ಜುಲೈ 21 ರಂದು ನಡೆದ ವೀರಶೈವ ಮಹಾಸಭಾದ ಚುನಾವಣೆಯಲ್ಲಿ ಮತ ಚಲಾಯಿಸಿ ಬಂದ ನಂತರ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದೆ.
ಇನ್ನು ಕೊಲೆಯಾದ ದೇವೇಂದ್ರಪ್ಪಜ್ಜ ಅವರ ಮನೆ ಹುಬ್ಬಳ್ಳಿಯ ವಿದ್ಯಾನಗರದ ಲೋಕಪ್ಪನಹಕ್ಕಲದ ಬಳಿಯಿದೆ. ಸದ್ಯ ನವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.