ತುಮಕೂರು:– ತಿಪಟೂರು ತಾಲೂಕಿನ ಕಾಡುಶೆಟ್ಟಿಹಳ್ಳಿಯಲ್ಲಿ ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯನ್ನು ಪತ್ನಿ ಹಾಗೂ ಆಕೆಯ ಪ್ರಿಯಕರ ಬರ್ಬರವಾಗಿ ಹತ್ಯೆಗೈದ ಘಟನೆ ಜರುಗಿದೆ. 50 ವರ್ಷದ ಶಂಕರಮೂರ್ತಿ ಹತ್ಯೆಯಾದ ವ್ಯಕ್ತಿ. ಹತ್ಯೆಗೈದ ಆರೋಪಿಗಳನ್ನು ಸುಮಂಗಳ ಹಾಗೂ ಆಕೆಯ ಪ್ರಿಯಕರ ನಾಗರಾಜು ಎಂದು ಗುರುತಿಸಲಾಗಿದೆ.
Advertisement
ಜೂ.24ರಂದು ಆರೋಪಿಗಳು ಶಂಕರಮೂರ್ತಿ ಕಣ್ಣಿಗೆ ಖಾರದ ಪುಡಿ ಎರಚಿ, ದೊಣ್ಣೆಯಿಂದ ಹೊಡೆದು, ಕುತ್ತಿಗೆ ಮೇಲೆ ಕಾಲಿಟ್ಟು ಭೀಕರವಾಗಿ ಕೊಂದಿದ್ದರು. ತಿಪಟೂರು ನಗರದ ಹಾಸ್ಟೆಲ್ ಒಂದರಲ್ಲಿ ಅಡುಗೆ ಕೆಲಸ ಮಾಡಿಕೊಂಡಿದ್ದ ಸುಮಂಗಳ, ಪಕ್ಕದ ಹಳ್ಳಿಯ ಕರಡಾಳು ಸಂತೆ ಗ್ರಾಮದ ನಾಗರಾಜು ಜೊತೆ ಸಂಬಂಧ ಹೊಂದಿದ್ದಳು. ಇದೇ ಕಾರಣಕ್ಕೆ ಪತಿಯನ್ನು ಕೊಲೆ ಮಾಡಲಾಗಿದೆ ಎಂದು ವಿಚಾರಣೆ ವೇಳೆ ತಿಳಿದು ಬಂದಿದೆ. ಈ ಸಂಬಂಧ ನೊಣವಿನಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.