Crime News: ಪತ್ನಿ ಕೊಂದು ಪೊಲೀಸರಿಗೆ ಶರಣಾದ ಗಂಡ!

0
Spread the love

ಬೆಂಗಳೂರು:- ಬೆಂಗಳೂರಿನ ಬಾಣಸವಾಡಿ ಠಾಣಾ ವ್ಯಾಪ್ತಿಯಲ್ಲಿ ಪತಿಯಿಂದಲೇ ಪತ್ನಿ ಭೀಕರವಾಗಿ ಹತ್ಯೆಯಾಗಿರುವ ಘಟನೆ ಜರುಗಿದೆ. ಹತ್ಯೆಯಾದ ಮಹಿಳೆಯನ್ನು ಕಲೈವಾಣಿ ಎಂದು ಗುರುತಿಸಲಾಗಿದೆ. ರಮೇಶ್ ಹೆಂಡತಿ ಕೊಂದ ಪಾಪಿ ಗಂಡ.

Advertisement

ಮೃತ ಕಲೈವಾಣಿ ಹಾಗೂ ಆರೋಪಿ ರಮೇಶ್ ಕಳೆದ ಕೆಲ ವರ್ಷದ ಹಿಂದೆ ಎರಡನೇ ವಿವಾಹವಾಗಿದ್ದರು. ಆರೋಪಿ ರಮೇಶ್ ಮರಗೆಲಸ ಮಾಡಿಕೊಂಡಿದ್ದ. ಆರೋಪಿ ರಮೇಶ್ ಗೆ ಅದಾಗಲೇ ಇಬ್ಬರು ಮಕ್ಕಳಿದ್ದರು. ಮಕ್ಕಳ ವಿಷಯವಾಗಿ ಕಳೆದ ಒಂದು ವರ್ಷದಿಂದ ಇಬ್ಬರ ನಡುವೆ ಗಲಾಟೆಯಿತ್ತು. ಈ ಗಲಾಟೆ ವಿಕೋಪಕ್ಕೆ ತಿರುಗಿ ಪತ್ನಿಯನ್ನ ಮರಗೆಲಸದ ಉಳಿಯಿಂದ ಹೊಡೆದು ರಮೇಶ್ ಹತ್ಯೆ ಮಾಡಿದ್ದಾನೆ. ಬಳಿಕ ಪೊಲೀಸ್ ಠಾಣೆಗೆ ಶರಣಾಗಿದ್ದಾನೆ.

ಘಟನೆ ಸಂಬಂಧ ಬಾಣಸವಾಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

LEAVE A REPLY

Please enter your comment!
Please enter your name here