Crime News: ವರ್ಷದ ಹಸುಗೂಸನ್ನು ನೀರಿನ ಸಿಂಟೆಕ್ಸ್ ಟ್ಯಾಂಕ್‌ಗೆ ಎಸೆದು ಮರ್ಡರ್!

0
Spread the love

ಬೆಂಗಳೂರು:- ಹಸುಗೂಸನ್ನು ನೀರಿನ ಸಿಂಟೆಕ್ಸ್ ಟ್ಯಾಂಕ್‌ಗೆ ಎಸೆದು ದುರುಳರು ಕೊಲೆಗೈದ ಘಟನೆ ರಾಜಧಾನಿ ಬೆಂಗಳೂರಿನಲ್ಲಿ ಜರುಗಿದೆ.

Advertisement

ನಗರದ ಆನೇಕಲ್ ತಾಲ್ಲೂಕಿನ ಇಗ್ಗಲೂರುನಲ್ಲಿ ಘಟನೆ ಜರುಗಿದೆ. ಆರೂವರೆ ತಿಂಗಳಿಗೆ ಸಿಜೇರಿಯನ್ ಮೂಲಕ ಮನು ಮತ್ತು ಹರ್ಷಿತಾ ದಂಪತಿಗೆ ಮಗು ಜನಿಸಿತ್ತು.

ಮಗುವಿಗೆ ಉಸಿರಾಟದ ತೊಂದರೆಯಿಂದಾಗಿ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಆಸ್ಪತ್ರೆಯಲ್ಲಿ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗಿತ್ತು. ಮಗು ಸಂಪೂರ್ಣ ಚೇತರಿಕೆ ಕಂಡ ಹಿನ್ನೆಲೆ ವಾರದ ಹಿಂದೆ ಮನೆಗೆ ಕರೆತರಲಾಗಿತ್ತು. ಆದರೆ ತಾಯಿ ಶೌಚಾಲಯಕ್ಕೆ ಹೋದಾಗ ಮಗು ಇದ್ದಕ್ಕಿದ್ದಂತೆ ಕಾಣೆಯಾಗಿದೆ.

ಈ ಬಗ್ಗೆ ಸೂರ್ಯನಗರ ಪೊಲೀಸರಿಗೆ ದೂರು ನೀಡಲಾಗಿತ್ತು. ಪೊಲೀಸರ ಪರಿಶೀಲನೆ ವೇಳೆ ಮನೆಯ ಸಿಂಟೆಕ್ಸ್ ನೀರಿನ ಟ್ಯಾಂಕ್‌ನಲ್ಲಿ ಮಗುವಿನ ಶವ ಪತ್ತೆಯಾಗಿದೆ.

ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರಿಂದ ತನಿಖೆ ಮುಂದುವರಿದಿದೆ.


Spread the love

LEAVE A REPLY

Please enter your comment!
Please enter your name here