ಮೈಸೂರು: ಮೈಸೂರಿನ ಸಾತಗಳ್ಳಿ ಸಮೀಪದ ಅಮೃತ ಬಡಾವಣೆಯಲ್ಲಿ ಖರ್ಚಿಗೆ ಹಣ ನೀಡಿಲ್ಲವೆಂದು ಕೋಪಗೊಂಡು ಮಂಗಳಮುಖಿಯರ ಮೇಲೆ ಯುವಕರು ತಲ್ವಾರ್ ನಿಂದ ಹಲ್ಲೆ ಮಾಡಿರುವ ಘಟನೆ ಜರುಗಿದೆ.
ಅಮೃತ ಬಡಾವಣೆಯ ಕೆಲ ಯುವಕರು, ಆನಮ್ ಎಂಬ ಮಂಗಳಮುಖಿ ಬಳಿ ಖರ್ಚಿಗೆ ಹಣ ಕೇಳಿದ್ದಾರೆ. ಇದಕ್ಕೆ ಆನಮ್ ನಿರಾಕರಿಸಿದಾಗ ಯುವಕರು ಗಲಾಟೆ ತೆಗೆದಿದ್ದಾರೆ. ಆಗ ಸ್ನೇಹಿತೆಯಾದ ಆನಮ್ ತನ್ನ ಮತ್ತೊಬ್ಬ ಸ್ನೇಹಿತೆ ಪಾರಿಯನ್ನು ಕರೆ ಮಾಡಿ ಕರೆಸಿಕೊಂಡಿದ್ದಾಳೆ. ಪಾರಿ ಸ್ಥಳಕ್ಕೆ ಬರುತ್ತಿದ್ದಂತೆ ಯುವಕರು ಹಲ್ಲೆ ಮಾಡಿದ್ದಾರೆ.
ಘಟನೆ ಸಂಬಂಧ ಮೈಸೂರಿನ ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಲ್ಲೆ ನಡೆಸಿದ ಯುವಕರ ಬಂಧನಕ್ಕೆ ಪೊಲೀಸರು ಶೋಧ ಕೈಗೊಂಡಿದ್ದಾರೆ.



