HomeBengaluru Newsಸಿಎಂ ಸಿದ್ದರಾಮಯ್ಯ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ಟೀಕಾಪ್ರಹಾರ

ಸಿಎಂ ಸಿದ್ದರಾಮಯ್ಯ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ಟೀಕಾಪ್ರಹಾರ

For Dai;y Updates Join Our whatsapp Group

Spread the love

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರ ನಡುವಿನ ಫೋನ್‌ ಸಂಭಾಷಣೆಯಲ್ಲಿ ಪ್ರಸ್ತಾಪಗೊಂಡಿದ್ದ ವಿವೇಕಾನಂದ ಎನ್ನುವ ಹೆಸರು ಕಳೆದ ರಾತ್ರಿ ಹೊರಬಿದ್ದ ಪೊಲೀಸ್‌ ಇನಸ್ಪೆಕ್ಟರ್‌ʼಗಳ ವರ್ಗಾವಣೆ ಪಟ್ಟಿಯಲ್ಲಿ ಪ್ರತ್ಯಕ್ಷವಾಗಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ ನಲ್ಲಿ ಟೀಕಾಪ್ರಹಾರ ನಡೆಸಿರುವ ಅವರು; ಕರ್ನಾಟಕದ ಕಲೆಕ್ಷನ್‌ ಪ್ರಿನ್ಸ್‌ ವಿಡಿಯೋದಲ್ಲಿ ನುಸುಳಿದ್ದ ವಿವೇಕಾನಂದ, 48 ಗಂಟೆಗಳ ಒಳಗಾಗಿಯೇ ವರ್ಗದ ಪಟ್ಟಿಯಲ್ಲಿ ಒಳನುಸಳಿದ್ದು ಹೇಗೆ!? ಎಂದು ಪ್ರಶ್ನೆ ಮಾಡಿದ್ದಾರೆ.

ಅಬ್ಬಬ್ಬಾ.. ಬಾಯಿ ತೆರೆದರೆ ಭಗವದ್ಗೀತೆ! ನಾಲಿಗೆ ಮೇಲೆ ನೈತಿಕತೆಯ ನಾಟ್ಯ!! ಮಾತಿ ಮಾತಿನಲ್ಲೂ ಮೌಲ್ಯಗಳದ್ದೇ ಮಥನ!! ಕೊನೆಗೆ, ಝಣ ಝಣ ಕಾಂಚಾಣ… ಇದೇ ನೋಡಿ ಬಹಿರಂಗವಾದ ಸಿಎಂ ಸಾಹೇಬರ ಸದ್ಯದ ಅಂತರಂಗ ಶುದ್ಧಿ! ಥೂ.. ನಾಚಿಕೆ ಆಗಬೇಕು ಎಂದು ಕಿಡಿಕಾರಿದ್ದಾರೆ.

ಕರ್ನಾಟಕದ ಕಲೆಕ್ಷನ್‌ ಪ್ರಿನ್ಸ್‌ ವಿಡಿಯೋದಲ್ಲಿ ನುಸುಳಿದ್ದ ವಿವೇಕಾನಂದ, 48 ಗಂಟೆಗಳ ಒಳಗಾಗಿಯೇ ವರ್ಗದ ಪಟ್ಟಿಯಲ್ಲಿ ಒಳನುಸಳಿದ್ದು ಹೇಗೆ!? ಓಹ್! ಒಂದು ಸರಕಾರ! ವಿಸ್ಮಯಗಳ ಆಗರ!! ಡೂಪ್ಲಿಕೇಟ್‌ ಸಿಎಂ-DCM ಸಲಹೆ ಮೇರೆಗೆ ಕಾಸಿಗಾಗಿ ಹುದ್ದೆ ವಿಡಿಯೋಗೆ CSR ಕಥೆ ಕಟ್ಟಿದ್ದ ಮುಖ್ಯಮಂತ್ರಿಗಳ ನೈತಿಕತೆಗೆ ನಯಗಾರಿಕೆಗೆ ನೂರೆಂಟು ನಮನ ಎಂದು ಕುಮಾರಸ್ವಾಮಿ ಅವರು ವ್ಯಂಗ್ಯವಾಡಿದ್ದಾರೆ.

ವಿಡಿಯೋ ವಿವೇಕಾನಂದ, ಗುಪ್ತವಾರ್ತೆಯಿಂದ ಮೈಸೂರು ವಿ.ವಿ.ಪುರಂಗೆ ಪೋಸ್ಟಿಂಗ್‌ ಪಡೆದಿದ್ದು ಹೇಗೆ? ʼಬರ್ಮುಡಾ ಟ್ರ್ಯಾಂಗಲ್‌ʼ ರಹಸ್ಯವನ್ನೇ ಮೀರಿಸಿದೆ ಈ ಚಿದಂಬರ ರಹಸ್ಯ. ಪ್ರಶ್ನೆ ಕೇಳುವುದು ನನ್ನ ವಿಧಿ, ಉತ್ತರ ಹೇಳಲೇಬೇಕು.. ಅದು ನಿಮ್ಮ ದುರ್ವಿಧಿ. ಆನ್ಸರ್‌ ಮಾಡಿ ಸಿದ್ದರಾಮಯ್ಯನವರೇ..? ಎಂದು ಮಾಜಿ ಮುಖ್ಯಮಂತ್ರಿಗಳು ಕಾಲೆಳೆದಿದ್ದಾರೆ.

ಕುಮಾರಸ್ವಾಮಿಗೆ ಹೊಟ್ಟೆಕಿಚ್ಚು. ದ್ವೇಷದಿಂದ ಮಗನ ವಿರುದ್ಧ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದಲ್ಲವೇ ನೀವು ಹೇಳಿದ್ದು. ಹಾಗಾದರೆ; 71 ಪೊಲೀಸ್‌ ಇನಸ್ಪೆಕ್ಟರ್‌ʼಗಳ ವರ್ಗದ ಈ ಯಾದಿಯ 4ನೇ ಹೆಸರಿನಲ್ಲೇ ಅಡಗಿದೆಯಲ್ಲಾ ನಿಮ್ಮ ‘ಸುಲಿಗೆಪುತ್ರ’ನ ಕೆಚ್ಚು! ಕ್ಷೇತ್ರತ್ಯಾಗದ ತ್ಯಾಗಮಯಿ, ಈಗ ವರುಣಾಕ್ಕೆ ವಕ್ಕರಿಸಿದ ಕೆಡಿಪಿ ಕಲಿ. ಏನಂತೀರಿ? ಎಂದು ಖಾರವಾಗಿ ಪ್ರಶ್ನಿಸಿದ್ದಾರೆ.

ಈ ಪಾಪದ ಕಾಸಿನ ಕಮಟು ದುರ್ನಾತ ಅಸಹ್ಯಕರ. ‘ವರ್ಗಾವರ್ಗಿ ಬಜೆಟ್‌’ನಲ್ಲಿ ನಿಮ್ಮ ಪಟಾಲಂದು ಶಿಖರಸಾಧನೆ! 6 ತಿಂಗಳ ಭರ್ಜರಿ ʼಅತೀಂದ್ರೀಯʼ ಅಟ್ಟಹಾಸ!! ‘ಕಾಸಿಗಾಗಿ ಹುದ್ದೆ& ಕಾಂಗ್ರೆಸ್‌ ಹುಂಡಿ’ ಎಂಬ ಸಿನಿಮಾವನ್ನೂ ಮಾಡಿ, ಕೆಡಿಪಿ ಕಲಿಯೇ ನಾಯಕ, ಟೆಂಪರರಿ ಸಿಎಂ-TCM ನಿರ್ಮಾಪಕ, ಡೂಪ್ಲಿಕೇಟ್‌ ಸಿಎಂ-DCM ನಿರ್ದೇಶಕ.. ಹೇಗಿದೆ? ಎಂದು ಕುಮಾಸ್ವಾಮಿ ಅವರು ಟಾಂಗ್‌ ನೀಡಿದ್ದಾರೆ.

ಸತ್ಯ ಹೇಳಿದರೆ ಗುಂಪುಗುಂಪಾಗಿ ಮೇಲೆ ಬೀಳುತ್ತೀರಿ.. ಬೆದರಿಸುತ್ತೀರಿ. ಕುಮಾರಸ್ವಾಮಿಯದು ಹಿಟ್‌ & ರನ್‌ ಅಂತೀರಿ, ಸುಳ್ಳು ಎನ್ನುತ್ತೀರಿ. ಕಣ್ಮುಂದೆ ವಿಡಿಯೋ ಸಾಕ್ಷ್ಯವಿದೆ. ರಾಜ್ಯದ ಜನ ನೋಡಿದ್ದಾರೆ. ಪಲಾಯನಕ್ಕೆ ಅವಕಾಶವೇ ಇಲ್ಲ. ನಿಮ್ಮ ಕೌರವ ದುರ್ನೀತಿ ನನ್ನ ಮುಂದೆ ನಡೆಯಲ್ಲ. ನಾನು ಒಬ್ಬನೇ ಒಬ್ಬ, ಅಂಜಿಕೆ ನನ್ನ ರಕ್ತದಲ್ಲೇ ಇಲ್ಲ ಎಂದು ನೇರವಾಗಿ ತಿರುಗೇಟು ನೀಡಿದ್ದಾರೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!