ಕೆರೆಯಲ್ಲಿ ಮೊಸಳೆ ಪ್ರತ್ಯಕ್ಷ: ಭಯ ಭೀತರಾದ ಜನತೆ

0
Spread the love

ಗದಗ: ಗದಗ ಜಿಲ್ಲೆ ಮುಂಡರಗಿ ತಾಲೂಕಿನ ತಾಮ್ರಗುಂಡಿ ಗ್ರಾಮದಲ್ಲಿ ಮೊಸಳೆ ಪ್ರತ್ಯಕ್ಷವಾಗಿ ರುವುದರಿಂದ ಗ್ರಾಮಸ್ಥರು ಆತಂಕಗೊಂಡಿದ್ದಾರೆ.

Advertisement

ಸುಮಾರು ಆರು ಅಡಿ ಉದ್ದವಿರುವ ಮೊಸಳೆಯು ಕೆರೆಯ ದಂಡೆಯಲ್ಲಿ ಮೇಯುತ್ತಿದ್ದ ಎಮ್ಮೆಗಳನ್ನು ಹಿಡಿಯಲು ಹೊಂಚು ಹಾಕುತ್ತಿದ್ದ ಸಂದರ್ಭದಲ್ಲಿ ದನಗಾಹಿಗಳು ಓಡಿಸಿದ್ದಾರೆ.

ದನಗಾಹಿಗಳು ಮೊಸಳೆಯನ್ನು ಓಡಿಸುತ್ತಿರುವ ವಿಡಿಯೊ ಈಗ ವೈರಲ್ ಆಗಿದ್ದು, ತಾಮ್ರಗುಂಡಿ ಹಾಗೂ ಅಕ್ಕಪಕ್ಕದ ಗ್ರಾಮಸ್ಥರು ಭಯ ಭೀತರಾಗಿದ್ದಾರೆ.

ತುಂಗಭದ್ರಾ ನದಿಯಲ್ಲಿ ಆಗಾಗ ಮೊಸಳೆಗಳು ಕಾಣಿಸಿಕೊಳ್ಳುತ್ತಿದ್ದು, ಅಲ್ಲಿರುವ ಮೊಸಳೆಯು ಕಾಲುವೆಯ ಮೂಲಕ ಕೆರೆಗೆ ಬಂದಿರಬಹುದು ಎಂದು ಅಂದಾಜಿಸಲಾಗಿದೆ. ತಾಮ್ರಗುಂಡಿ ಹಾಗೂ ಅದರ ಸುತ್ತಮುತ್ತಲಿನ ಗ್ರಾಮಗಳ ಜನರು ತಮ್ಮ ಜಾನುವಾರುಗಳನ್ನು ಮೇಯಿಸಲು ಹಾಗೂ ಅವುಗಳಿಗೆ ನೀರು ಕುಡಿಸಲು ತಾಮ್ರಗುಂಡಿ  ಗ್ರಾಮದ ಕೆರೆಗೆ ಬರುತ್ತಾರೆ. ಕೆರೆಯಲ್ಲಿ ಮೊಸಳೆ ಪ್ರತ್ಯಕ್ಷವಾಗಿರುವುದರಿಂದ ಅವರೆಲ್ಲ ಈಗ ಆತಂಕಕ್ಕೆ ಒಳಗಾಗಿದ್ದಾರೆ.

 


Spread the love

LEAVE A REPLY

Please enter your comment!
Please enter your name here