ಗೌರ್ಮೆಂಟ್ ಕೆಲಸ ಕೊಡಿಸುತ್ತೇನೆಂದು ಕೋಟಿ-ಕೋಟಿ ವಂಚನೆ: ಆರೋಪಿ ಅರೆಸ್ಟ್!

0
Spread the love

ಮಂಡ್ಯ:- ಗೌರ್ಮೆಂಟ್ ಕೆಲಸ ಕೊಡಿಸುತ್ತೇನೆಂದು ಕೋಟಿ-ಕೋಟಿ ಹಣ ಪಡೆದು ವಂಚನೆ ಎಸಗಿದ ಆರೋಪಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.

Advertisement

ಹೆಚ್.ಸಿ.ವೆಂಕಟೇಶ್ ಬಂಧಿತ ಆರೋಪಿ. ಈತ ಮಂಡ್ಯ ನಗರದ ತಾವರೆಗೆರೆ ನಿವಾಸಿ ಎನ್ನಲಾಗಿದೆ. ಆರೋಪಿಯು, ತಾನೊಬ್ಬ ದೊಡ್ಡ ಅಧಿಕಾರಿ ಎಂದು ಬಿಂಬಿಸಿಕೊಂಡು ನಿಮ್ಮ ಮಕ್ಕಳಿಗೆ, ನಿಮ್ಮ ಹೆಂಡತಿಗೆ ಸರ್ಕಾರಿ ಕೆಲಸ ಕೊಡಿಸುತ್ತೇನೆ ಎಂದು ಲಕ್ಷ ಲಕ್ಷ ಪೀಕಿ ವಂಚಿಸೋದು ಈತನ ಕೆಲಸ. ವಿಧಾನಸೌಧದಲ್ಲಿ ಅಧಿಕಾರಿಯಾಗಿದ್ದೇನೆ ಎಂದು ಬಿಲ್ಡಪ್ ಕೊಟ್ಟು ಈ ಭೂಪ ಮಂಡ್ಯದ ಹಲವರಿಗೆ ವಂಚಿಸಿದ್ದಾನೆ.

ಆರೋಪಿ ಹೆಚ್.ಸಿ.ವೆಂಕಟೇಶ್ ಸರ್ಕಾರಿ ಅಧಿಕಾರಿ ಎಂದು ಹೇಳಿಕೊಂಡು ಕೆಲಸ ಕೊಡಿಸುವುದಾಗಿ ನಂಬಿಸಿ ಎರಡು ಕೋಟಿ ರೂಪಾಯಿಗೂ ಅಧಿಕ ಹಣ ಸುಲಿಗೆ ಮಾಡಿದ್ದನು. ಹಣ ನೀಡಿದ ಬಳಿಕ, ನಕಲಿ ನೇಮಕಾತಿ ಪತ್ರವನ್ನು ಸಂತ್ರಸ್ತರಿಗೆ ನೀಡುತ್ತಿದ್ದನು. ಅಬಕಾರಿ ಇಲಾಖೆಯಲ್ಲಿ ಚಾಲಕ ಹುದ್ದೆ ಕೊಡಿಸುತ್ತೇನೆಂದು ಓರ್ವರಿಂದ ನಕಲಿ ದಾಖಲೆ ಸೃಷ್ಟಿಸಿ ಮೂವರಿಂದ 45 ಲಕ್ಷ ರೂ. ಪಡೆದು ವಂಚಿಸಿದ್ದಾನೆ.

ಆರೋಪಿ ವೆಂಕಟೇಶ್​​ ವಿರುದ್ಧ ಮಂಡ್ಯ ಪೂರ್ವ ಠಾಣೆಯಲ್ಲಿ ಪ್ರತ್ಯೇಕ 3 ಪ್ರಕರಣ ದಾಖಲಾಗಿವೆ. 316(2), 318(4), 336(3), 61, 351(2), 3(5) ಅಡಿ ಪ್ರಕರಣ ದಾಖಲಾಗಿವೆ.


Spread the love

LEAVE A REPLY

Please enter your comment!
Please enter your name here