IPL 2025: ಮುಂಬೈ ಇಂಡಿಯನ್ಸ್ ವಿರುದ್ಧ CSKಗೆ ಹೀನಾಯ ಸೋಲು: ಮಹೇಂದ್ರ ಸಿಂಗ್ ಧೋನಿ ಹೇಳಿದ್ದೇನು..?

0
Spread the love

ವಾಂಖೆಡೆ ಮೈದಾನದಲ್ಲಿ ನಡೆದ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ 9 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ. ಚೆನ್ನೈ ಸೂಪರ್ ಕಿಂಗ್ಸ್ ನೀಡಿದ್ದ 177 ರನ್​ಗಲ ಗುರಿಯನ್ನ ಮುಂಬೈ ಇಂಡಿಯನ್ಸ್ ಕೇವಲ ಒಂದು ವಿಕೆಟ್ ಕಳೆದುಕೊಂಡು ಸುಲಭವಾಗಿ ಜಯ ಸಾಧಿಸಿತು. ಇನ್ನೂ ಈ ಸೋಲಿನ ಬಳಿಕ ಮಾತನಾಡಿದ ಸಿಎಸ್​ಕೆ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ,

Advertisement

ನಾವು ತುಂಬಾ ಕೆಳಮಟ್ಟದಲ್ಲಿದ್ದೆವು ಎಂದು ನಾನು ಭಾವಿಸುತ್ತೇನೆ. ಏಕೆಂದರೆ ದ್ವಿತೀಯಾರ್ಧದಲ್ಲಿ ಇಬ್ಬನಿ ಬೀಳುತ್ತದೆ ಎಂದು ನಮಗೆಲ್ಲರಿಗೂ ತಿಳಿದಿತ್ತು. ಹೀಗಾಗಿ ನಾವು ಮಧ್ಯಮ ಓವರ್‌ಗಳಲ್ಲಿ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಲು ಪ್ಲ್ಯಾನ್ ರೂಪಿಸಿದ್ದೆವು. ಆದರೆ ಈ ಹಂತದಲ್ಲಿ ಜಸ್​ಪ್ರೀತ್ ಬುಮ್ರಾ ಬೌಲಿಂಗ್ ಮಾಡಿ ನಮ್ಮ ಯೋಜನೆಗಳನ್ನು ವಿಫಲಗೊಳಿಸಿದರು.

ಬುಮ್ರಾ ಈಗ ವಿಶ್ವದ ಅತ್ಯುತ್ತಮ ಡೆತ್ ಬೌಲರ್‌ಗಳಲ್ಲಿ ಒಬ್ಬರು. ಹೀಗಾಗಿ ಅವರು ಬೌಲಿಂಗ್ ಆರಂಭಿಸುವ ಮುನ್ನವೇ ನಾವು ಬಿರುಸಿನ ಬ್ಯಾಟಿಂಗ್​​ ಆರಂಭಿಸಬೇಕಿತ್ತು. ಆ ಬಳಿಕ ಬುಮ್ರಾ ಓವರ್​ನಲ್ಲಿ ರನ್ ಗಳಿಸಿದ್ದರೆ ಅದು ಪ್ಲಸ್ ಪಾಯಿಂಟ್ ಆಗುತ್ತಿತ್ತು. ಆದರೆ ಅದು ನಮ್ಮಿಂದ ಸಾಧ್ಯವಾಗಲಿಲ್ಲ. ಇದಾಗ್ಯೂ ಕೆಲ ಓವರ್​ಗಳಲ್ಲಿ ನಾವು ಮತ್ತಷ್ಟು ರನ್​ಗಳನ್ನು ಗಳಿಸಬಹುದಿತ್ತು ಎಂಬುದು ನನ್ನ ಭಾವನೆ ಎಂದು ಧೋನಿ ಹೇಳಿದರು.


Spread the love

LEAVE A REPLY

Please enter your comment!
Please enter your name here