ವಾಂಖೆಡೆ ಮೈದಾನದಲ್ಲಿ ನಡೆದ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ 9 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದೆ. ಚೆನ್ನೈ ಸೂಪರ್ ಕಿಂಗ್ಸ್ ನೀಡಿದ್ದ 177 ರನ್ಗಲ ಗುರಿಯನ್ನ ಮುಂಬೈ ಇಂಡಿಯನ್ಸ್ ಕೇವಲ ಒಂದು ವಿಕೆಟ್ ಕಳೆದುಕೊಂಡು ಸುಲಭವಾಗಿ ಜಯ ಸಾಧಿಸಿತು. ಇನ್ನೂ ಈ ಸೋಲಿನ ಬಳಿಕ ಮಾತನಾಡಿದ ಸಿಎಸ್ಕೆ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ,
ನಾವು ತುಂಬಾ ಕೆಳಮಟ್ಟದಲ್ಲಿದ್ದೆವು ಎಂದು ನಾನು ಭಾವಿಸುತ್ತೇನೆ. ಏಕೆಂದರೆ ದ್ವಿತೀಯಾರ್ಧದಲ್ಲಿ ಇಬ್ಬನಿ ಬೀಳುತ್ತದೆ ಎಂದು ನಮಗೆಲ್ಲರಿಗೂ ತಿಳಿದಿತ್ತು. ಹೀಗಾಗಿ ನಾವು ಮಧ್ಯಮ ಓವರ್ಗಳಲ್ಲಿ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಲು ಪ್ಲ್ಯಾನ್ ರೂಪಿಸಿದ್ದೆವು. ಆದರೆ ಈ ಹಂತದಲ್ಲಿ ಜಸ್ಪ್ರೀತ್ ಬುಮ್ರಾ ಬೌಲಿಂಗ್ ಮಾಡಿ ನಮ್ಮ ಯೋಜನೆಗಳನ್ನು ವಿಫಲಗೊಳಿಸಿದರು.
ಬುಮ್ರಾ ಈಗ ವಿಶ್ವದ ಅತ್ಯುತ್ತಮ ಡೆತ್ ಬೌಲರ್ಗಳಲ್ಲಿ ಒಬ್ಬರು. ಹೀಗಾಗಿ ಅವರು ಬೌಲಿಂಗ್ ಆರಂಭಿಸುವ ಮುನ್ನವೇ ನಾವು ಬಿರುಸಿನ ಬ್ಯಾಟಿಂಗ್ ಆರಂಭಿಸಬೇಕಿತ್ತು. ಆ ಬಳಿಕ ಬುಮ್ರಾ ಓವರ್ನಲ್ಲಿ ರನ್ ಗಳಿಸಿದ್ದರೆ ಅದು ಪ್ಲಸ್ ಪಾಯಿಂಟ್ ಆಗುತ್ತಿತ್ತು. ಆದರೆ ಅದು ನಮ್ಮಿಂದ ಸಾಧ್ಯವಾಗಲಿಲ್ಲ. ಇದಾಗ್ಯೂ ಕೆಲ ಓವರ್ಗಳಲ್ಲಿ ನಾವು ಮತ್ತಷ್ಟು ರನ್ಗಳನ್ನು ಗಳಿಸಬಹುದಿತ್ತು ಎಂಬುದು ನನ್ನ ಭಾವನೆ ಎಂದು ಧೋನಿ ಹೇಳಿದರು.