ವಿಜಯಸಾಕ್ಷಿ ಸುದ್ದಿ, ಗದಗ: ಸ್ಲಂ ಜನಾಂದೋಲನ ಕರ್ನಾಟಕ, ಸಾವಿತ್ರಿಬಾಯಿ ಫುಲೆ ಮಹಿಳಾ ಸಂಘಟನೆ ಹಾಗೂ ಗದಗ ಜಿಲ್ಲಾ ಕೊಳಚೆ ನಿವಾಸಿಗಳ ಹಿತರಕ್ಷಣ ಸಮಿತಿಯ ಸಂಯುಕ್ತ ಆಶ್ರಯದಲ್ಲಿ ಬೆಳಗಾವಿ ವಿಭಾಗ ಮಟ್ಟದ ಸ್ಲಂ ಜನರ ಬೃಹತ್ ಸಮಾವೇಶ ಹಾಗೂ ಸಾಂಸ್ಕೃತಿಕ ಹಬ್ಬವನ್ನು ಮೇ 28ರಂದು ಬೆಳಗ್ಗೆ 11 ಗಂಟೆಗೆ ನಗರದ ಡಾ. ಬಿ.ಆರ್. ಅಂಬೇಡ್ಕರ್ ಸಮುದಾಯ ಭವನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಗದಗ ಜಿಲ್ಲಾ ಸ್ಲಂ ನಿವಾಸಿಗಳ ಹಿತರಕ್ಷಣಾ ಸಮಿತಿ ಅಧ್ಯಕ್ಷ ಇಮ್ತಿಯಾಜ್ ಮಾನ್ವಿ ಮಾಹಿತಿ ನೀಡಿದರು.
ಶನಿವಾರ ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ವಿಶೇಷ ಆಹ್ವಾನಿತರಾಗಿ ಗದಗ-ಬೆಟಗೇರಿ ನಗರಸಭೆ ಪೌರಾಯುಕ್ತ ರಾಜಾರಾಮ್ ಪವಾರ್, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಮಹೇಶ ಪುತ್ತಾರ, ಕನ್ನಡಪ್ರಭ ಪ್ರಧಾನ ವರದಿಗಾರ ಶಿವಕುಮಾರ ಕುಷ್ಟಗಿ, ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ಕಾರ್ಯಪಾಲಕ ಅಭಿಯಂತರ ಪ್ರವೀಣ್ ಹೊಂಗನಹಳ್ಳಿ, ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ಗದಗ ಉಪ ವಿಭಾಗದ ಅಭಿಯಂತರ ಮಂಜುನಾಥ, ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ವೆಂಕಟೇಶಯ್ಯ, ಪ್ರಗತಿಪರ ಚಿಂತಕ ಸತೀಶ್ ಪಾಶಿ, ಜಿಲ್ಲಾ ಸ್ಲಂ ಸಮಿತಿ ಉಪಾಧ್ಯಕ್ಷ ಅಶೋಕ ಕುಡತಿನ್ನಿ, ಸಾವಿತ್ರಿಬಾಯಿ ಫುಲೆ ಮಹಿಳಾ ಸಂಘಟನೆಯ ಸಂಚಾಲಕಿ ಶೋಭಾ ಕಮತರ್, ವಿಜಯಪುರ ಜಿಲ್ಲಾ ಸಂಚಾಲಕಿ ವೆಂಕಮ್ಮ, ಬಸವರಾಜ ಪೂಜಾರ ಸೇರಿದಂತೆ ಅನೇಕ ಗಣ್ಯರು ಆಗಮಿಸುವರು ಎಂದರು.
ಈ ಸಂದರ್ಭದಲ್ಲಿ ಅಶೋಕ ಕುಡತಿನ್ನಿ, ಇಬ್ರಾಹಿಂ ಮುಲ್ಲಾ, ವೆಂಕಮ್ಮ ಹೊಸಪೇಟೆ, ಅಶೋಕ ಕುಸುಬಿ, ಶೋಬಾ ಹುಬ್ಬಳ್ಳಿ, ಪರವೀನ್ ಬಾನು ಹವಾಲ್ದಾರ್, ಖಾಜಾಸಾಬ್ ಇಸ್ಮಾಯಿಲ್ ನವರ, ಶರಣಪ್ಪ ಸೂಡಿ, ಮೆಹಬೂಬ್ ಸಾಬ್ ಬಳ್ಳಾರಿ ಮುಂತಾದವರು ಹಾಜರಿದ್ದರು.
ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಕಾರ್ಯಕ್ರಮ ಉದ್ಘಾಟಿಸುವರು. ಸ್ಲಂ ಹಬ್ಬ ಕಾರ್ಯಕ್ರಮಕ್ಕೆ ಕಾರ್ಮಿಕ ಸಚಿವ ಸಂತೋಷ ಲಾಡ್ ಚಾಲನೆ ನೀಡುವರು. ಸ್ಲಂ ಜನಾಂದೋಲನ ರಾಜ್ಯ ಸಂಚಾಲಕ ಎ. ನರಸಿಂಹಮೂರ್ತಿ ಅಧ್ಯಕ್ಷತೆ ವಹಿಸುವರು. ಅತಿಥಿಗಳಾಗಿ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ಹಾಗೂ ಹುಬ್ಬಳ್ಳಿ ಶಾಸಕ ಪ್ರಸಾದ ಅಬ್ಬಯ್ಯ, ಹಾವೇರಿ-ಗದಗ ಲೋಕಸಭಾ ಸದಸ್ಯ ಬಸವರಾಜ ಬೊಮ್ಮಾಯಿ, ವಿ.ಪ ಸದಸ್ಯ ಎಸ್.ವಿ. ಸಂಕನೂರ, ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಆಗಮಿಸುವರು ಎಂದು ಇಮ್ತಿಯಾಜ್ ಮಾನ್ವಿ ಮಾಹಿತಿ ನೀಡಿದರು.