ವಿಜಯಸಾಕ್ಷಿ ಸುದ್ದಿ, ಗದಗ: ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯ ಗದಗ ಇವರ ವತಿಯಿಂದ ಮಹಾಶಿವರಾತ್ರಿಯ ಅಂಗವಾಗಿ ನಗರದ ಮುನ್ಸಿಪಲ್ ಹೈಸ್ಕೂಲ್ ಮೈದಾನದಲ್ಲಿ ಆಯೋಜಿಸಲಾಗಿದ್ದ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಶ್ರದ್ಧಾ ಸ್ವರ ಸಂಗೀತ ವೆಲ್ಫೇರ್ ಟ್ರಸ್ಟ್ ಸಂಸ್ಥೆಯ ಮಕ್ಕಳು ಯಶಸ್ವಿಯಾಗಿ ಭಾಗವಹಿಸಿ ಸಂಗೀತ ಹಾಗೂ ಭರತನಾಟ್ಯ ಕಾರ್ಯಕ್ರಮವನ್ನು ಪ್ರದರ್ಶಿಸಿದರು.
ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಕೆ. ಪಾಟೀಲ ಉದ್ಘಾಟಿಸಿ ಮಾತನಾಡಿ, ಇಂತಹ ಸಾಂಸ್ಕೃತಿಕ ಕಾರ್ಯಕ್ರಮಗಳು ಸಮಾಜದಲ್ಲಿ ಮೌಲ್ಯ ಮತ್ತು ಸಂಸ್ಕೃತಿಯನ್ನು ಬೆಳೆಸುವಲ್ಲಿ ಮಹತ್ವದ ಪಾತ್ರ ವಹಿಸುತ್ತವೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಮಾಜಿ ಶಾಸಕರಾದ ಡಿ.ಆರ್. ಪಾಟೀಲ್, ಬಿ.ಬಿ. ಅಸೂಟಿ, ಬಿ.ಕೆ. ಜಯಂತಿ ಅಕ್ಕನವರು, ಬಿ.ಕೆ. ಸಾವಿತ್ರಿ ಅಕ್ಕನವರು, ಅಕ್ಬರಸಾಬ್ ಬಬರ್ಚಿ ಮುಂತಾದವರು ಉಪಸ್ಥಿತರಿದ್ದರು.
ಸಂಸ್ಥೆಯ ಅಧ್ಯಕ್ಷರಾದ ಜ್ಯೋತಿ ಉಜ್ವಲ್ ಕಬಾಡಿ, ಭರತನಾಟ್ಯ ಶಿಕ್ಷಕಿ ವರ್ಷಾ ಕಲಕಂಬಿ ನೇತೃತ್ವದಲ್ಲಿ ನಡೆದ ಭರತನಾಟ್ಯ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಾದ ಶ್ರದ್ಧಾ ಕಬಾಡಿ, ಅಪೂರ್ವ, ವೈಷ್ಣವಿ, ವೇದಾ, ಸ್ಪೂರ್ತಿ, ವೈಷ್ಣವಿ ಗುಳೇದಗುಡ್ಡ ಹಾಗೂ ಮೇಧಾ ಭಾಗವಹಿಸಿದ್ದರು.
ಉಜ್ವಲ್ ಕಬಾಡಿ ಹಾರ್ಮೋನಿಯಂ ಸಾಥ್ ಮತ್ತು ಹನುಮಂತ ಮೈತ್ರಿ ತಬಲಾ ಸಾಥ್ ನೀಡಿದರು.
ಸಂಸ್ಥೆಯ ಕಾರ್ಯದರ್ಶಿ ಉಜ್ವಲ್ ಕಬಾಡಿ ಮುಂತಾದವರು ಉಪಸ್ಥಿತರಿದ್ದರು.



