ಕರ್ನಾಟಕದ ಈಗಿನ ರಾಜಕಾರಣ ಬಹಳ ಕೀಳುಮಟ್ಟಕ್ಕೆ ಇಳಿದಿದೆ: ಕೆಎಸ್ ಈಶ್ವರಪ್ಪ

0
Spread the love

ಬಾಗಲಕೋಟೆ: ನಮ್ಮ ದೇಶದ ಇತಿಹಾಸದಲ್ಲಿ ಕರ್ನಾಟಕದ ಈಗಿನ ರಾಜಕಾರಣ ಬಹಳ ಕೀಳುಮಟ್ಟಕ್ಕೆ ಇಳಿದಿದೆ ಎಂದು ಕೆಎಸ್ ಈಶ್ವರಪ್ಪ ಹೇಳಿದರು. ಬಾಗಲಕೋಟೆಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನಮ್ಮ ದೇಶದ ಇತಿಹಾಸದಲ್ಲಿ ಕರ್ನಾಟಕದ ಈಗಿನ ರಾಜಕಾರಣ ಬಹಳ ಕೀಳುಮಟ್ಟಕ್ಕೆ ಇಳಿದಿದೆ. ಆಡಳಿತ ಪಕ್ಷ ಭ್ರಷ್ಟಾಚಾರ ಮಾಡಿರುವುದಕ್ಕೆ ವಿರೋಧ ಪಕ್ಷ ಆಪಾದನೆ ಮಾಡೋದು ತಪ್ಪಲ್ಲ.

Advertisement

ಆದರೆ ವಿರೋಧ ಪಕ್ಷ ಆಪಾದನೆ ಮಾಡಿದ್ದನ್ನು ಆಡಳಿತ ಪಕ್ಷ ತನಿಖೆ ಮಾಡಿಸಿ ಅದರಲ್ಲಿ ತಾವು ತಪ್ಪಿತಸ್ಥರಲ್ಲ ಅಂತ ಹೊರಗೆ ಬರಬೇಕು, ಅದು ಪದ್ಧತಿ. ತಪ್ಪಿತಸ್ಥರಾಗಿದ್ದರೆ ಅವರಿಗೆ ಏನು ಶಿಕ್ಷೆಯಾಗಬೇಕೊ ಅದು ಆಗುತ್ತದೆ. ಆದರೆ ಈಗ ಆಡಳಿತ ಪಕ್ಷ ಬಂದು ಒಂದೂವರೆ ವರ್ಷದ ನಂತರ ಸಿದ್ದರಾಮಯ್ಯ ಬಗ್ಗೆ ಇತರರ ಬಗ್ಗೆ ಆರೋಪವನ್ನು ವಿಪಕ್ಷದವರು ಮಾಡುತ್ತಿದ್ದಾರೆ.

ಆಪಾದನೆ ಮಾಡುವ ಈ ಸಂದರ್ಭದಲ್ಲಿ ಒಂದೊಂದು ರೂಪದ ಹೋರಾಟ ನಡೆಯುತ್ತಿವೆ. ಭ್ರಷ್ಟಾಚಾರದ ತನಿಖೆಯ ಈ ಸಂದರ್ಭದಲ್ಲಿ ವೈಯಕ್ತಿಕ ಟೀಕೆ ಎಷ್ಟು ಕೀಳುಮಟ್ಟಕ್ಕೆ ಇಳಿದಿದೆ ಅಂದರೆ ಟಿವಿ ನೋಡುವುದಕ್ಕೆ ಬೇಸರ ಆಗುತ್ತಿದೆ. ಹೊಸದಾಗಿ ರಾಜಕಾರಣಕ್ಕೆ ಬರುವ ರಾಜಕಾರಣಿಗಳು ಮಹಿಳಾ ರಾಜಕಾರಣಿಗಳು ಎಂದರು.


Spread the love

LEAVE A REPLY

Please enter your comment!
Please enter your name here