ಹಾಸನ: ಹಾಸನಾಂಬೆ ದರ್ಶನದ ವೇಳೆ ವಿದ್ಯುತ್ ತಗುಲಿ 17 ಜನರು ಅಸ್ವಸ್ಥರಾಗಿದ್ದ ಹಿನ್ನಲೆ ಹಾಸನ ಜಿಲ್ಲಾಸ್ಪತ್ರೆ ಬಳಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತೆರೆಳಿದ್ದಾರೆ. ಈ ವೇಳೆ ಮಾತನಾಡಿದ ಅವರು ‘ಹಾಸನಾಂಬೆ ದರ್ಶನದ ವೇಳೆ ಕರೆಂಟ್ ಶಾಕ್ ಹೊಡೆದಿದ್ದು ಸ್ಪಷ್ಟವಾಗಿದೆ. ಇದೇ ವೇಳೆ ನೂಕಾಟ ತಳ್ಳಾಟದ ವೇಳೆ ಹಲವರಿಗೆ ಗಾಯಗಳಾಗಿದೆ. ಗಾಯಾಳುಗಳಿಗೆ ಚಿಕಿತ್ಸೆ ಕೊಡಿಸಲಾಗಿದೆ, ಸದ್ಯ ಆರೋಗ್ಯವಾಗಿದ್ದು, ಕರೆಂಟ್ ಶಾಕ್ನಿಂದ ಓರ್ವ ಯುವತಿ ಅಸ್ವಸ್ಥಗೊಂಡಿದ್ದಾರೆ. ಯಾರೂ ಆತಂಕಪಡುವ ಅಗತ್ಯವಿಲ್ಲ ಎಂದರು.
Trending Now



