HomeKarnataka NewsCWRCಯಿಂದ ಕುಡಿಯುವ ನೀರಿಗೆ ಮಾತ್ರ ಆದೇಶ, ತಮಿಳುನಾಡಿಗೆ ನೀರು ಬಿಡುವ ಸೂಚನೆ ಇಲ್ಲ: ಸಚಿವ ರಾಮಲಿಂಗಾರೆಡ್ಡಿ

CWRCಯಿಂದ ಕುಡಿಯುವ ನೀರಿಗೆ ಮಾತ್ರ ಆದೇಶ, ತಮಿಳುನಾಡಿಗೆ ನೀರು ಬಿಡುವ ಸೂಚನೆ ಇಲ್ಲ: ಸಚಿವ ರಾಮಲಿಂಗಾರೆಡ್ಡಿ

For Dai;y Updates Join Our whatsapp Group

ಬೆಂಗಳೂರು: ಕಾವೇರಿ ಜಲ ನಿಯಂತ್ರಣ ಸಮಿತಿ (CWRC) ಕುಡಿಯುವ ನೀರಿನ ಅಗತ್ಯವನ್ನು ಗಮನದಲ್ಲಿಟ್ಟುಕೊಂಡು ಮಾತ್ರ ನಿರ್ದೇಶನ ನೀಡಿದ್ದು, ತಮಿಳುನಾಡಿಗೆ ಹೆಚ್ಚುವರಿ ನೀರು ಬಿಡುಗಡೆ ಮಾಡುವಂತೆ ಯಾವುದೇ ಆದೇಶ ನೀಡಿಲ್ಲ ಎಂದು ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟಪಡಿಸಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ದೆಹಲಿಯಲ್ಲಿ ನಡೆದ CWRC ಸಭೆಯಲ್ಲಿ ಕರ್ನಾಟಕದ ಜಲ ಪರಿಸ್ಥಿತಿಯನ್ನು ರಾಜ್ಯದ ಅಧಿಕಾರಿಗಳು ವಿಡಿಯೊ ಕಾನ್ಫರೆನ್ಸ್ ಮೂಲಕ ಸಮಿತಿಯ ಗಮನಕ್ಕೆ ತಂದಿದ್ದಾರೆ ಎಂದು ಹೇಳಿದರು.

ತಮಿಳುನಾಡು ಕಾವೇರಿ ನೀರು ಬಿಡುಗಡೆ ಮಾಡುವಂತೆ ಸಭೆಯಲ್ಲಿ ಒತ್ತಾಯ ಮಾಡಿತ್ತು. ಆದರೆ, ಸಮಿತಿಯು ಕುಡಿಯುವ ನೀರಿನ ಅಗತ್ಯಕ್ಕೆ ಆದ್ಯತೆ ನೀಡುವಂತೆ ಮಾತ್ರ ಸೂಚನೆ ನೀಡಿದೆ. ತಮಿಳುನಾಡಿಗೆ ನೀರು ಬಿಡುಗಡೆ ಮಾಡುವಂತೆ ಯಾವುದೇ ನಿರ್ದೇಶನ ನೀಡಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.

“ತಮಿಳುನಾಡಿಗೆ ತಕ್ಷಣ ನೀರು ಬಿಡುವುದಿಲ್ಲ. ನೀರು ಬಿಡುವಂತೆ ಆದೇಶವೇ ಬಂದಿಲ್ಲ. ಯಾರು ಬೇಕಾದರೂ ಆರೋಪ ಮಾಡಬಹುದು. ಆದರೆ, ಎಷ್ಟು ನೀರು ಬಿಡುಗಡೆ ಮಾಡಲಾಗಿದೆ ಎಂಬುದು ಬಿಳಿಗುಂಡ್ಲು ಮಾಪನ ಕೇಂದ್ರದಲ್ಲೇ ಸ್ಪಷ್ಟವಾಗುತ್ತದೆ. ಸದ್ಯಕ್ಕೆ ತಮಿಳುನಾಡಿಗೆ 3 ಟಿಎಂಸಿ ನೀರು ಮಾತ್ರ ಹರಿದಿದ್ದು, ಅದಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ನೀರು ಬಿಡಲು ನಮ್ಮ ಬಳಿ ಲಭ್ಯತೆ ಇಲ್ಲ” ಎಂದು ಸಚಿವರು ಹೇಳಿದರು.

ಮಂಡ್ಯ ಜಿಲ್ಲೆಯ ರೈತರಿಗೆ ನೀರು ಪೂರೈಕೆ ಮಾಡುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, CWRC ಕುಡಿಯುವ ನೀರಿನ ವಿಚಾರವನ್ನು ಮಾತ್ರ ಪ್ರಸ್ತಾಪಿಸಿದೆ. ರೈತರಿಗೆ ನೀರು ಪೂರೈಕೆ ಸಂಬಂಧ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ಚರ್ಚಿಸಿದ ಬಳಿಕ ಸರ್ಕಾರದ ಮುಂದಿನ ನಿರ್ಧಾರವನ್ನು ತಿಳಿಸಲಾಗುವುದು ಎಂದು ಹೇಳಿದರು.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img