ಬೆಳಗಾವಿ:- ಜಿಲ್ಲೆಯ ಸವದತ್ತಿ ತಾಲೂಕಿನ ಮುನವಳ್ಳಿ ಪಟ್ಟಣದಲ್ಲಿ ಸಿಲಿಂಡರ್ ಸ್ಪೋಟಗೊಂಡು ಬೇಕರಿ ಸುಟ್ಟು ಕರಕಲಾದ ಘಟನೆ ಜರುಗಿದೆ.
Advertisement
ಘಟನೆಯಿಂದ ಬೇಕರಿಯಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಸಾಮಗ್ರಿ ಸುಟ್ಟು ಕರಕಲಾಗಿದೆ. ಹಾಸನ ಮೂಲದ ವಿರೂಪಾಕ್ಷ ಎಂಬುವವರಿಗೆ ಸೇರಿದ ಬೇಕರಿ ಇದಾಗಿದೆ. ಇಂದು ಎಂದಿನಂತೆ ಬೇಕರಿಯಲ್ಲಿ ಕೆಲಸ ಮಾಡುವ ವೇಳೆ ಸಿಲಿಂಡರ್ ಸ್ಪೋಟಗೊಂಡಿದೆ. ಅದೃಷ್ಟವಶಾತ್ ಅಲ್ಲಿದ್ದ ಕೆಲಸಗಾರರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕೂಡಲೇ ಸ್ಥಳಕ್ಕೆ ದೌಡಾಯಿಸಿ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.
ಸವದತ್ತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.