ಸಿಲಿಂಡರ್ ಸ್ಪೋಟ ದುರಂತ: ಮೃತ 8 ಅಯ್ಯಪ್ಪ ಮಾಲಾಧಾರಿ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ!

0
Spread the love

ಹುಬ್ಬಳ್ಳಿ:- ಹುಬ್ಬಳ್ಳಿಯಲ್ಲಿ ಆತಂಕದ ವಾತಾವರಣ ನಿರ್ಮಾಣ ಮಾಡಿದ್ದ ಅಯ್ಯಪ್ಪ ಮಾಲಾಧಾರಿಗಳ ಸಾವಿನ ಪ್ರಕರಣ ಎಂತವರ ಕಣ್ಣಲ್ಲಿಯೂ ನೀರು ಬರುವಂತೆ ಮಾಡಿದೆ. ಮಕ್ಕಳನ್ನು ಕಳೆದುಕೊಂಡ ತಾಯಂದಿರ ಗೋಳಾಟ ಎಲ್ಲರ ಮನಕಲುಕಿದೆ. ಈ ನಿಟ್ಟಿನಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಸಾವನ್ನಪ್ಪಿದ 8 ಅಯ್ಯಪ್ಪ ಮಾಲಾಧಾರಿಗಳ ಕುಟುಂಬಗಳಿಗೆ ರಾಜ್ಯ ಸರ್ಕಾರ ತಲಾ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದೆ.

Advertisement

ಪರಿಹಾರಕ್ಕಾಗಿ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್​ ಬರೆದಿದ್ದ ಪತ್ರಕ್ಕೆ ಸಿಎಂ ಸಿದ್ದರಾಮಯ್ಯ ಸ್ಪಂದಿಸಿದ್ದಾರೆ.

ಇನ್ನೂ ಡಿಸೆಂಬರ್​​​ 22ರ ರಾತ್ರಿ ಅವಘಡ ಸಂಭವಿಸಿದ್ದು, ಘಟನೆಗೂ ಮುನ್ನ ಎಲ್ಲರು ಭಕ್ತಿಯಿಂದ ಪೂಜೆ ಮಾಡಿದ್ದರು. ಇನ್ನು 9 ಮಂದಿ ಪೈಕಿ 12 ವರ್ಷದ ಬಾಲಕ ವಿನಾಯಕ ಬದುಕುಳಿದಿದ್ದಾನೆ. ಇನ್ನೆರಡು ದಿನದಲ್ಲಿ ಬಾಲಕ ಡಿಸ್ಚಾರ್ಜ್​ ಆಗುವ ಸಾಧ್ಯತೆ ಇದೆ. 8 ಮಂದಿ ಬಲಿ ಪಡೆದ ಅಗ್ನಿ ಅವಘಡಕ್ಕೆ ಹುಬ್ಬಳ್ಳಿ ಜನ ನಿಜಕ್ಕೂ ಬೆಚ್ಚಿಬಿದಿದ್ದಾರೆ.


Spread the love

LEAVE A REPLY

Please enter your comment!
Please enter your name here