ಮೈಸೂರು: ಹುಣಸೂರು ತಾಲ್ಲೂಕಿನ ವಡ್ಡರಗುಡಿಯಲ್ಲಿ ಸಿಲಿಂಡರ್ ಸೋರಿಕೆಯಿಂದ ಬೆಂಕಿ ಕಾಣಿಸಿಕೊಂಡು ಅತ್ತೆ-ಸೊಸೆ ಪವಾಡದ ರೀತಿ ಪಾರಾಗಿರುವ ಘಟನೆ ಜರುಗಿದೆ.
Advertisement
ಘಟನೆಯಲ್ಲಿ ಚಿನ್ನಾಭರಣ ಸೇರಿದಂತೆ ಪದಾರ್ಥಗಳು ನಾಶವಾಗಿದೆ. ಘಟನೆಯಿಂದ ಮನೆಯ ಮೇಲ್ಚಾವಣಿ ಹಾನಿಯಾಗಿದೆ. ಚಿನ್ನಾಭರಣ, ಆಹಾರ ಪದಾರ್ಥಗಳು, ವಸ್ತುಗಳು ಬೆಂಕಿಗಾಹುತಿಯಾಗಿದೆ.
ಘಟನೆಯಲ್ಲಿ 60 ಗ್ರಾಂ ಚಿನ್ನಾಭರಣ 3 ಲಕ್ಷ ರೂ. ನಗದು ಸೇರಿ ಮನೆಯಲ್ಲಿದ್ದ ವಸ್ತುಗಳು ಬೆಂಗಿಗಾಹುತಿಯಾಗಿದೆ. ಸಿಲಿಂಡರ್ನ ಜೋರು ಶಬ್ದ ಕೇಳಿ ನೆರೆಹೊರೆಯವರು ಬಂದು ಇಬ್ಬರನ್ನೂ ರಕ್ಷಿಸಿದ್ದಾರೆ. ಕೂಡಲೇ ಸ್ಥಳಕ್ಕಾಗಮಿಸಿ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಬಿಳಿಕೆರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.